ಪುತ್ತೂರು: ಶ್ರೀ ಅಯ್ಯಪ್ಪ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಮಿನಿಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಅಯ್ಯಪ್ಪ ದೇವರಿಗೆ ಮಹಾಪೂಜೆ, ಗುಳಿಗ ದೈವದ ನೇಮೋತ್ಸವ ಮಾ. 23ರಂದು ನಡೆಯಲಿದೆ.
ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ, ಶ್ರೀ ಮಹಾಬಲೇಶ್ವರ ಸ್ವಾಮೀಜಿ ಹಾಗೂ ಜ್ಯೋತಿಷಿ ಗಣೇಶ್ ಭಟ್ ಕೇಕನಾಜೆ ಅವರ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೆ. ಉದಯ ನಾರಾಯಣ ಕಲ್ಲೂರಾಯ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸ್ಥಳ ಶುದ್ಧಿ ಪೂರ್ವಕ ಗಣಪತಿ ಹವನ ನಡೆದು ಭಜನೆ, ಮಧ್ಯಾಹ್ನ ಅಯ್ಯಪ್ಪ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ಮಧ್ಯಾಹ್ನ 2ರಿಂದ ಕ್ಷೇತ್ರ ರಕ್ಷಕ ಗುಳಿದ ದೈವದ ನರ್ತನ ಸೇವೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಶ್ರೀ ಅಯ್ಯಪ್ಪ ಸೇವಾ ಟ್ರಸ್ಟ್ ಹಾಗೂ ಮಿನಿಪದವು ಶ್ರೀ ಅಯ್ಯಪ್ಪ ಭಕ್ತವೃಂದದ ಪ್ರಕಟಣೆ ತಿಳಿಸಿದೆ.
ಕ್ಷೇತ್ರದ ಬಗ್ಗೆ:
ಸುಮಾರು 47 ವರ್ಷಗಳ ಹಿಂದೆ ಮಿನಿಪದವಿನಲ್ಲಿ ಅಯ್ಯಪ್ಪ ಭಜನಾ ಮಂದಿರವನ್ನು ಅನಂತ ನಾಯ್ಕ ಹಾಗೂ ಊರವರು ಸ್ಥಾಪಿಸಿದರು. ವರ್ಷದಲ್ಲಿ ಒಂದು ಬಾರಿ ಮಕರ ಸಂಕ್ರಮಣದ ಸಂದರ್ಭ ಅಯ್ಯಪ್ಪ ಮಾಲಾಧಾರಿಗಳು 48 ದಿನಗಳ ಕಾಲ ಈ ಮಂದಿರದಲ್ಲಿ ವಾಸ್ತವ್ಯವಿದ್ದು, ಶರಣುಘೋಷ, ಪಡಿಪೂಜೆ ಹಾಗೂ ಶಬರಿಮಲೆಗೆ ಹೋಗುವ ದಿನ ಗಣಪತಿ ಹೋಮ, ಅಯ್ಯಪ್ಪ ಪೂಜೆ, ಪಡಿಪೂಜೆ ಹಾಗೂ ಅನ್ನದಾನ ಕಾರ್ಯಕ್ರಮಗಳು ವರ್ಷಂಪ್ರತಿ ನಡೆದುಕೊಂಡು ಬರುತ್ತಿದ್ದವು. ಕಾಲಾಂತರದಲ್ಲಿ ಈ ಕಾರ್ಯಕ್ರಮಗಳು ನಿಂತು ಹೋಗುವಂತಾಯಿತು.
ಇತ್ತೀಚಿನ ಕೆಲ ವರ್ಷಗಳಲ್ಲಿ ಈ ಗುಡಿಯ ಎದುರು ಭಾಗದ ರಸ್ತೆಯಲ್ಲಿ ಹಾದುಹೋಗುವ ವಾಹನಗಳು ಅಪಘಾತಕ್ಕೆ ಒಳಗಾಗುವುದು ಹೆಚ್ಚತೊಡಗಿತು. ವಾಹನ ಸವಾರರು ಹಾಗೂ ಅಕ್ಕಪಕ್ಕದಲ್ಲಿ ವಾಸ್ತವ್ಯವಿದ್ದ ಮನೆಯವರು ಭಯಬೀತರಾದರು. ಕಾರಣ ಏನೆಂದು ಜ್ಯೋತಿಷ್ಯ ಮುಖೇನ ತಿಳಿದಾಗ, ಮುಂಚಿನಿಂದಲೂ ನಡೆದುಕೊಂಡು ಬರುತ್ತಿದ್ದ ಅಯ್ಯಪ್ಪ ಸ್ವಾಮಿ ಪೂಜಾ ಕಾರ್ಯದಿ ಅನ್ನದಾನ ಸೇವೆಗಳು ನಿಂತು ಹೋಗಿರುವುದೇ ಇದಕ್ಕೆಲ್ಲಾ ಕಾರಣ ಎಂದು ತಿಳಿದು ಬಂತು. ಆ ನಂತರದಲ್ಲಿ ಊರವರನ್ನು ಒಟ್ಟು ಸೇರಿಕೊಂಡು ವರ್ಷಪೂರ್ತಿ ಆಗಾಗ ಪೂಜಾ ಕೈಂಕರ್ಯ ನಡೆಸಿಕೊಂಡು ಬರಲಾಗುತ್ತಿದೆ. ತದನಂತರ ಯಾವುದೇ ಅಪಘಾತಗಳು ಈ ಪರಿಸರದಲ್ಲಿ ಸಂಭವಿಸಿಲ್ಲ.
ಬಳಿಕ ಸ್ಥಳೀಯರು ಸೇರಿಕೊಂಡು ಅಯ್ಯಪ್ಪ ಸೇವಾ ಟ್ರಸ್ಟ್ (ರಿ.) ಮಿನಿಪದವು ಎಂಬ ಹೆಸರಿನಲ್ಲಿ ರಿಜಿಸ್ಟರ್ಡ್ ಬಾಡಿಯನ್ನು ಸ್ಥಾಪಿಸಿ, 2024ರ ಜನವರಿಯಲ್ಲಿ ಜೀರ್ಣೋದ್ಧಾರ ನಡೆಸಲಾಗಿದೆ.
ಮಿನಿಪದವು: ಮಾ. 23ರಂದು ಶ್ರೀ ಅಯ್ಯಪ್ಪ ಸಾನಿಧ್ಯದಲ್ಲಿ ಗುಳಿಗ ದೈವದ ನೇಮೋತ್ಸವ
ಶ್ರೀ ಅಯ್ಯಪ್ಪ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಮಿನಿಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಅಯ್ಯಪ್ಪ ದೇವರಿಗೆ ಮಹಾಪೂಜೆ, ಗುಳಿಗ ದೈವದ ನೇಮೋತ್ಸವ ಮಾ. 23ರಂದು ನಡೆಯಲಿದೆ.
What's your reaction?
- 1894c
- 1894cc
- 18ai technology
- 17ajjavara
- 17alwas
- 17apology
- 17artificial intelegence
- 16avg
- 16bihar minister
- 16bjp
- 15bjp leader
- 15bjp national president
- 15bt ranjan
- 15co-operative
- 14coastal
- 14crime
- 14crime news
- 13cyclothon
- 13darmasthala
- 13death news
- 13dust bin
- 12education
- 12fraud
- 12gl
- 11gods own country
- 11gold
- 11google for education
- 11independence
- 10jewel
- 10jewellers
- 10jnana vikasa
- 10karnataka state
- 9kerala village
- 9lokayuktha
- 9lokayuktha raid
- 8manipal
- 8minister krishna bairegowda
- 8mla ashok rai
- 8mohan alwa
- 7mudubidre
- 7nidana news
- 7nirvathu mukku
- 6nitin nabin
- 6police
- 6ptr tahasildar
- 6puttur
- 5puttur news
- 5puttur tahasildar
- 5republic
- 4revenue
- 4revenue department
- 4revenue minister
- 4school
- 3senior citizen
- 3silver
- 3society
- 3sowmya
- 2students
- 2tahasildar
- 2tahasildar absconded
- 1teachers
- 1tour
- 1trending
- 1udupi
- 0wastage
Related Posts
ನೆಲ್ಲಿಕಟ್ಟೆಯಲ್ಲಿ ದೇವಳದ 8 ಸೆಂಟ್ಸ್ ಜಾಗ ಮರುಸ್ವಾಧೀನ: ಸೌಹಾರ್ದಯುತವಾಗಿ ಮನೆ ತೆರವು
ಪುತ್ತೂರು: ಸ್ಥಳೀಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಆಸ್ತಿಗಳನ್ನು…
ಬನ್ನೂರಿನಲ್ಲಿ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟಕ್ಕೆ ಸಿದ್ಧತೆ: ಆಮಂತ್ರಣ ಪತ್ರ ಅನಾವರಣ
ಪುತ್ತೂರು: ಬನ್ನೂರಿನ ಸ್ಫೂರ್ತಿ ಮೈದಾನದಲ್ಲಿರುವ ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ ಮಾರ್ಚ್…
ಅಲ್ಲಿಪಾದೆ ಸಂತ ಅಂಥೋನಿ ಇಗರ್ಜಿಯಲ್ಲಿ ಸಂಭ್ರಮದ ಸಾಂತ್’ಮಾರಿ
ಬಂಟ್ವಾಳ: ಅಲ್ಲಿಪಾದೆ ಸಂತ ಅಂಥೋನಿಯವರ ಚರ್ಚ್'ನಲ್ಲಿ ಸಾಂತ್’ಮಾರಿ ಹಬ್ಬವನ್ನು ಬುಧವಾರ…
ಶಬರಿಮಲೆ ಸಂಪ್ರದಾಯ ಕಾಪಾಡಲು ಟಿಡಿಬಿ ನಿರ್ಧಾರ: ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ
ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಮಹತ್ವದ…
ಕಾರ್ಪಾಡಿ ಜಾತ್ರೆಗೆ ಗೊನೆ ಮುಹೂರ್ತ, ಬಲ್ಲೇರಿಮಲೆ ಯಾತ್ರೆ
ಪುತ್ತೂರು: ಆರ್ಯಾಪು ಗ್ರಾಮದ ಗ್ರಾಮ ದೇವಸ್ಥಾನವಾದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ…
ಒಂದೂವರೆ ವರ್ಷದಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಕಾರ್ಯ ಪೂರ್ಣ: ಶಾಸಕ ಅಶೋಕ್ ರೈ
ಪುತ್ತೂರು: ಮುಂದಿನ ಒಂದೂವರೆ ವರ್ಷದೊಳಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…
ಚಂದ್ರಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದರ್ಶನ ಸಮಯ ಬದಲಾವಣೆ
ಧರ್ಮಸ್ಥಳ: ಮಾರ್ಚ್ 3 ರಂದು ಸಂಭವಿಸಲಿರುವ ರಕ್ತ ಚಂದ್ರಗ್ರಹಣದ ಹಿನ್ನೆಲೆ ಶ್ರೀ ಮಂಜುನಾಥ…
ಮಹಾಶಿವರಾತ್ರಿ ಅಂಗವಾಗಿ ಪುತ್ತೂರಿನಲ್ಲಿ ಸಾಮೂಹಿಕ ಯೋಗ ಶಿವ ನಮಸ್ಕಾರ
ಪುತ್ತೂರು: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ,…
ಪುತ್ತೂರಿನಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ವಾರ್ಷಿಕೋತ್ಸವ
ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು…
ಫೆ. 25ರಿಂದ ಮಾ. 1ರವರೆಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವ
ಪುತ್ತೂರು:ದೇಯಿ ಬ್ಯೆದಿತಿ, ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ…




















