Gl harusha
ಧಾರ್ಮಿಕ

ಸಣ್ಣ ಪ್ರಾಣಿ ಸಾಕುವ ಯೋಗ್ಯತೆ ಇಲ್ಲದವರು ಕಂಬಳಕ್ಕೆ ಅಡ್ಡಿಪಡಿಸಿದರೆ ಸಹಿಸಲು ಅಸಾಧ್ಯ|  ಉಬಾರ್ ಕಂಬಳೋತ್ಸವದ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಒಂದುಸಣ್ಣ ಪ್ರಾಣಿ ಸಾಕುವ ಯೋಗ್ಯತೆ ಇಲ್ಲದವರು ಪೇಟಾದ ಹೆಸರಿನಲ್ಲಿ ಕಂಬಳಕ್ಕೆ ಅಡ್ಡಿಪಡಿಸುವುದನ್ನು ಸಹಿಸಲಾರೆ,  ವರ್ಷಕ್ಕೆ 30 ಲಕ್ಷಕ್ಕೂ ಮಿಗಿಲಾಗಿ ಕಂಬಳ ಕೋಣಗಳ ಆರೈಕೆಗೆ ಖರ್ಚು ಮಾಡುವ ರೈತ ಕಂಬಳದ ಕೋಣಗಳನ್ನು ತನ್ನ ಮಕ್ಕಳಂತೆ ಸಾಕಿ ಸಲಹುತ್ತಾನೆ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಕಂಬಳ ಕ್ರೀಡೆಗೆ ಇದ್ದ ಅಡೆತಡೆಗಳನ್ನು ನಿವಾರಿಸಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಒಂದುಸಣ್ಣ ಪ್ರಾಣಿ ಸಾಕುವ ಯೋಗ್ಯತೆ ಇಲ್ಲದವರು ಪೇಟಾದ ಹೆಸರಿನಲ್ಲಿ ಕಂಬಳಕ್ಕೆ ಅಡ್ಡಿಪಡಿಸುವುದನ್ನು ಸಹಿಸಲಾರೆ,  ವರ್ಷಕ್ಕೆ 30 ಲಕ್ಷಕ್ಕೂ ಮಿಗಿಲಾಗಿ ಕಂಬಳ ಕೋಣಗಳ ಆರೈಕೆಗೆ ಖರ್ಚು ಮಾಡುವ ರೈತ ಕಂಬಳದ ಕೋಣಗಳನ್ನು ತನ್ನ ಮಕ್ಕಳಂತೆ ಸಾಕಿ ಸಲಹುತ್ತಾನೆ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಕಂಬಳ ಕ್ರೀಡೆಗೆ ಇದ್ದ ಅಡೆತಡೆಗಳನ್ನು ನಿವಾರಿಸಲಾಗಿದೆ ಎಂದು ಶಾಸಕ, ಉಪ್ಪಿನಂಗಡಿ ವಿಜಯ- ವಿಕ್ರಮ ಕಂಬಳ ಸಮಿತಿಯ ಅಧ್ಯಕ್ಷರೂ ಆದ ಅಶೋಕ್ ಕುಮಾರ್ ಕೋಡಿಂಬಾಡಿ ತಿಳಿಸಿದರು.

srk ladders
Pashupathi
Muliya

ಉಪ್ಪಿನಂಗಡಿಯ ಕೂಟೇಲುವಿನ ಬಳಿ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರ ಚಾಲನೆ ಪಡೆದ ವಿಜಯ- ವಿಕ್ರಮ ಜೋಡುಕರೆ ಕಂಬಳದಲ್ಲಿ ರಾತ್ರಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ  ದೇವಾಲಯದ ಅಭಿವೃದ್ಧಿಗೆ 352 ಕೋ.ರೂ. ಅನುದಾನ ದೊರೆತ್ತಿದ್ದು, ಇದರಲ್ಲಿ ನೇತ್ರಾವತಿ ನದಿಗೆ ಅಣೆಕಟ್ಟು ಕಟ್ಟಿ, ನದಿಯಲ್ಲಿರುವ ಉದ್ಭವ ಲಿಂಗಕ್ಕೆ ತೆರಳಿ ಪೂಜೆ ಸಲ್ಲಿಸಲು ಕೂಡಲ ಸಂಗಮದಂತೆ ವ್ಯವಸ್ಥೆಗಳನ್ನು ಮಾಡಲಾಗುವುದು. ಈ ಪುಣ್ಯ ಕ್ಷೇತ್ರವನ್ನು ಧಾರ್ಮಿಕ ಕೇಂದ್ರವಾಗಿಯೂ ನದಿಯ ಪರಿಸರವನ್ನು ಪ್ರವಾಸೋದ್ಯಮ ಕೇಂದ್ರವಾಗಿಯೂ ಪರಿವರ್ತಿಸಲಾಗುವುದು. ನೇತ್ರಾವತಿ ನದಿಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು. ೧೫ ಕೋ.ರೂ.ನಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಲಾಗುವುದು.  ನದಿ ಬದಿಯಲ್ಲಿ ರಸ್ತೆ ಮಾಡಿ ಅಲ್ಲಿ ವ್ಯಾಪಾರ ಕೇಂದ್ರಗಳಿಗೆ ಅವಕಾಶ ಮಾಡಿಕೊಡಲಾಗುವುದು. ೧೦ ಕೋ.ರೂ. ವೆಚ್ಚದಲ್ಲಿ ಪಿಂಡ ಪ್ರಧಾನಕ್ಕೆ ಬೇಕಾದ ಕಟ್ಟಡಗಳನ್ನು ನಿರ್ಮಿಸಲಾಗುವುದು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಪುಣ್ಯ ಕ್ಷೇತ್ರಗಳ ಅಭಿವೃದ್ಧಿಯ ಮೂಲಕ ನಾನು ನನ್ನ ನೈಜ ಹಿಂದುತ್ವವನ್ನು ಸಾದರಪಡಿಸುತ್ತಿದ್ದೇನೆ ಎಂದರು. 

ತುಳುವನ್ನು ರಾಜ್ಯದ ಹೆಚ್ಚುವರಿ ಭಾಷೆಯಾಗಿ ತೆಗೆದುಕೊಳ್ಳಬೇಕೆಂಬ ನನ್ನ ಹೋರಾಟ ನಿರಂತರ ನಡೆಯುತ್ತಿದ್ದು, ಇನ್ನು ೩-೪ ತಿಂಗಳಲ್ಲಿ ಮೊದಲಾಗಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬಳಿಕ ರಾಜ್ಯದಲ್ಲಿ ಅದು ಆಗಲಿದೆ. ಬೆಂಗಳೂರಿನಲ್ಲಿ ಈಗಾಗಲೇ ತುಳು ಭವನಕ್ಕಾಗಿ ೫ ಎಕರೆ ಜಾಗವನ್ನು ರಾಜ್ಯ ಸರಕಾರ ನೀಡಿದ್ದು, ಮುಂದೆ ಪಿಲಿಕುಳದಲ್ಲಿಯೂ ತುಳು ಭವನ ನಿರ್ಮಿಸಲಾಗುವುದು. ಇದರೊಂದಿಗೆ ಕಂಬಳ ಉಳಿವಿಗಾಗಿಯೂ ನನ್ನ ಕಾನೂನು ಹೋರಾಟ ನಿರಂತರ ಸಾಗುತ್ತಿದೆ. ನಮ್ಮ ಕಂಬಳಕ್ಕೆ ಅಳಿವಿಲ್ಲ. ತುಳು ಭಾಷೆ, ತುಳುನಾಡು, ತುಳುವರು ಇರುವಷ್ಟು ದಿನ ಕಂಬಳವೆನ್ನುವುದು ನಿರಂತರವಾಗಲಿದೆ ಎಂದರು.

ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಚಲನಚಿತ್ರ ನಟ ವಿನುತ್ ಕುಮಾರ್, ನಟಿ ಸಮಂತಾ ಅಮೀನ್ ಮಾತನಾಡಿ ಶುಭ ಹಾರೈಸಿದರು.

ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ., ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯರಾದ ಶಿವನಾಥ ರೈ ಮೇಗಿನಗುತ್ತು, ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಾಸಪ್ಪ ಗೌಡ, ಆಡಳಿತ ಮೊಕ್ತೇಸರರಾದ ಯೋಗೀಶ ಪೂಜಾರಿ ಕಡ್ತಿಲ, ಎಚ್.ಆರ್.ಪಿ. ನರ್ಸಿಂಗ್ ಕಾಲೇಜಿನ ಅಧ್ಯಕ್ಷರಾದ ಹರಿಪ್ರಸಾದ್ ರೈ ಮಠಂತಬೆಟ್ಟು, ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಹೇಮನಾಥ ಶೆಟ್ಟಿ ಕಾವು, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ.ಎಸ್. ಮಹಮ್ಮದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು,  ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಕಂಬಳ ತೀರ್ಪುಗಾರರಾದ ಗುಣಪಾಲ ಕಡಂಬ, ವೈದ್ಯ ಡಾ. ರಘು ಬೆಳ್ಳಿಪ್ಪಾಡಿ, ಉದ್ಯಮಿಗಳಾದ ರಮೇಶ್ ರೈ ಡಿಂಬ್ರಿ, ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ರಾಜೀವ ಶೆಟ್ಟಿ ಕೇದಗೆ, ನಿಹಾಲ್ ಶೆಟ್ಟಿ, ನಿಶಿತ್ ಶೆಟ್ಟಿ ಕಂಗ್ವೆ, ಯು. ರಾಮ, ಶಾಸಕರ ತಾಯಿ ಗಿರಿಜಾ ಸಂಜೀವ ರೈ, ಪತ್ನಿ ಸುಮಾ ಅಶೋಕ್ ರೈ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೃಷ್ಣ ಜಿ. ರಾವ್ ಆರ್ತಿಲ, ೩೪ ನೆಕ್ಕಿಲಾಡಿ ಕಾಂಗ್ರೆಸ್ ವಲಯಾಧ್ಯಕ್ಷೆ ಅನಿ ಮಿನೇಜಸ್, ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ಪ್ರಧಾನ ಕಾರ್ಯದರ್ಶಿ ಅಬ್ದರ‍್ರಹ್ಮಾನ್ ಯುನಿಕ್, ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷ ಸುದರ್ಶನ್ ನಾಯ್ಕ್ ಕಂಪ, ಭೂನ್ಯಾಯ ಮಂಡಳಿ ಸದಸ್ಯ ಎಂ. ಮಂಜುನಾಥ್ ಕೆಮ್ಮಾಯಿ, ಸದಸ್ಯ ರಂಜಿತ್ ಬಂಗೇರ,  ಪ್ರಮುಖರಾದ ನಯನ ರೈ, ಪ್ರಜ್ವಲ್ ರೈ ಪಾತಾಜೆ, ಮಹಾಬಲ ಶೆಟ್ಟಿ, ರಿತೇಶ್ ಶೆಟ್ಟಿ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜತೀಂದ್ರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಬೊಳ್ಳಾವು, ನವೀನ್ ಕಲ್ಯಾಟೆ, ದಿನೇಶ್ ಬೊಳ್ವಾರು, ವಿಕ್ರಂ ಶೆಟ್ಟಿ ಅಂತರ, ಸಂದೀಪ್ ಕುಪ್ಟೆಟ್ಟಿ,  ಉದ್ಯಮಿ ಚಿದಾನಂದ ರೈ ಎಸ್., ಯು.ಕೆ. ಮುಹಮ್ಮದ್ ಅಶ್ರಫ್ ಶುಕ್ರಿಯಾ, ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು,  ಉಪಾಧ್ಯಕ್ಷರಾದ ವಿದ್ಯಾಧರ ಜೈನ್ ಪದ್ಮವಿದ್ಯಾ, ನಟೇಶ್ ಪೂಜಾರಿ, ರಾಮಚಂದ್ರ ಮಣಿಯಾಣಿ, ಸುದೇಶ್ ಶೆಟ್ಟಿ ಶಾಂತಿನಗರ, ಉಮಾನಾಥ ಶೆಟ್ಟಿ ಪೆರ್ನೆ, ಜಗನ್ನಾಥ ಶೆಟ್ಟಿ ನಡುಮನೆ, ಮೋನಪ್ಪ ಗೌಡ ಪಮ್ಮನಮಜಲು, ಕಾರ್ಯದರ್ಶಿಗಳಾದ ಶಿವರಾಮ ಶೆಟ್ಟಿ ಕರಾಯ, ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ಸಂಘಟನಾ ಕಾರ್ಯದರ್ಶಿಗಳಾದ ಯೊಗೀಶ್ ಎಸ್. ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ದಿಲೀಪ್ ಶೆಟ್ಟಿ ಕರಾಯ, ವಿಜಯ ಪೂಜಾರಿ ಚೀಮುಳ್ಳು, ಸಹ ಸಂಚಾಲಕರಾದ  ಕುಮಾರನಾಥ ಪಲ್ಲತ್ತಾರು ಮತ್ತಿತರರು ಉಪಸ್ಥಿತರಿದ್ದರು. 

 ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಸ್ವಾಗತಿಸಿದರು. ಕಂಬಳ ಸಮಿತಿಯ ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

130 ಜೊತೆ ಕೋಣಗಳು

ಉಪ್ಪಿನಂಗಡಿಯ ವಿಜಯ- ವಿಕ್ರಮ ಕಂಬಳದಲ್ಲಿ ನೇಗಿಲು ಕಿರಿಯ, ಹಗ್ಗ ಹಿರಿಯ, ನೇಗಿಲು ಹಿರಿಯ ಹಗ್ಗ ಹಿರಿಯ, ಅಡ್ಡಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಒಟ್ಟು ೧೩೧ ಜೊತೆ ಕೋಣಗಳು ಭಾಗವಹಿಸಿದವು. 

ಸನ್ಮಾನ

ಕಂಬಳದ ಸಭಾ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಂಬಳ ಕೋಣಗಳ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಹಾಗೂ ಹಿರಿಯ ಕಂಬಳ ಕೋಣಗಳ ಓಟಗಾರ ಮಹಾಬಲ ಶೆಟ್ಟಿ ಬಾಲಾಜೆ ಗುತ್ತು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts