ಧಾರ್ಮಿಕ

ಶ್ರೀ ರಾಮ ನವಮಿ ಪ್ರಯುಕ್ತ ಸಮರ ಸೌಗಂಧಿಕಾ ತಾಳಮದ್ದಳೆ

ಶ್ರೀ ರಾಮ ನವಮಿಯ ಪ್ರಯುಕ್ತ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಪುತ್ತೂರು ಇದರ ವತಿಯಿಂದ ಕಾಸರಗೋಡು ಸಮೀಪದ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಳದ ಬಳಿ ಇರುವ ಶ್ರೀ ಮಹಾಬಲ ಶೆಟ್ಟಿ ಇವರ ಮನೆ ಶ್ರೀ ರಾಮ ಧಾಮದಲ್ಲಿ ಏ. 6ರಂದು ತಾಳಮದ್ದಳೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ರಾಮ ನವಮಿಯ ಪ್ರಯುಕ್ತ
ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಪುತ್ತೂರು ಇದರ ವತಿಯಿಂದ ಕಾಸರಗೋಡು ಸಮೀಪದ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಳದ ಬಳಿ ಇರುವ ಶ್ರೀ ಮಹಾಬಲ ಶೆಟ್ಟಿ ಇವರ ಮನೆ ಶ್ರೀ ರಾಮ ಧಾಮದಲ್ಲಿ ಏ. 6ರಂದು ತಾಳಮದ್ದಳೆ ನಡೆಯಿತು.

ಗಣೇಶ್ ಕೊಲೆಕ್ಕಾಡಿ ವಿರಚಿತ ಸಮರ ಸೌಗಂಧಿಕಾ ಎಂಬ ಆಖ್ಯಾನದೊಂದಿಗೆ ಜರಗಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯ ಶ್ರೀ ಕುಲ್ಕುಂದ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಮುರಳೀ ಮಾಧವ ಮಧೂರು ಗೋಪಾಲಕೃಷ್ಣ ಮಧೂರು ಸಹಕರಿಸಿದರು.
ಮುಮ್ಮೇಳದಲ್ಲಿ, ಶುಭಾ ಅಡಿಗ (ಭೀಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ದ್ರೌಪದಿ),ಹರಿಣಾಕ್ಷಿ ಜೆ ಶೆಟ್ಟಿ(ಹನೂಮಂತ), ಶುಭಾ ಗಣೇಶ್(ಕುಬೇರ), ಸಹಕರಿಸಿದರು.

ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ಹರಿದಾಸ
ಶ್ರೀ ಮಹಾಬಲ ಶೆಟ್ಟಿ ಕೂಡ್ಲು ವಂದಿಸಿದರು. ಕೂಡ್ಲು ಕುಟುಂಬಸ್ಥರು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ…

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…