ಧಾರ್ಮಿಕ

ಶ್ರದ್ಧಾ ಭಕ್ತಿಗೆ ದೇವರ ಅನುಗ್ರಹ ಪ್ರಾಪ್ತಿ : ಬ್ರಹ್ಮಶ್ರೀ ಕೆಮ್ಮಿಂಜೆ ಕಾರ್ತಿಕ ತಂತ್ರಿ

tv clinic
ಬಾರ್ಯ ಶ್ರೀ ಮಹಾವಿಷ್ಣುದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರಗಿದ ಶ್ರೀ ಮಹಾವಿಷ್ಣುಯಾಗದ ಧಾರ್ಮಿಕ ಸಭೆಯಲ್ಲಿ ಯಾಗದ ಫಲಶ್ರುತಿ ನಿರೂಪದಲ್ಲಿ ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಭಗವಂತನನ್ನು ಒಲಿಸಲು ನಾಮಸಂಕೀರ್ತನೆ ಸುಲಭದ ದಾರಿ. ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಸಕಲ ದುರಿತಗಳು ನಿವಾರಣೆಯಾಗಿ ಶ್ರೇಯಸ್ಸನ್ನು ಸಂಪಾದಿಸಬಹುದೆಂದು ಬ್ರಹ್ಮಶ್ರೀ ಕೆಮ್ಮಿoಜೆ ಕಾರ್ತಿಕ ತಂತ್ರಿಗಳು
ಬಾರ್ಯ ಶ್ರೀ ಮಹಾವಿಷ್ಣುದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರಗಿದ ಶ್ರೀ ಮಹಾವಿಷ್ಣುಯಾಗದ ಧಾರ್ಮಿಕ ಸಭೆಯಲ್ಲಿ ಯಾಗದ ಫಲಶ್ರುತಿ ನಿರೂಪದಲ್ಲಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಪುತ್ತೂರಿನ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ಟರು ದೇವಳದ ಆಡಳಿತ ಟ್ರಸ್ಟ್ ಮತ್ತು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ ಸಿಸಿಟಿವಿ ಉದ್ಘಾಟಿಸಿ ಶುಭ ಹಾರೈಸಿದರು.

akshaya college

ಶ್ರೀ ನಳೀಲು ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ದೇವಳಕ್ಕೆ ಸೇವೆಯಾಗಿ ಭದ್ರತಾ ಕೋಶವನ್ನು ಸಮರ್ಪಿಸಿದ ಬಗ್ಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಪೊಲೀಸ್ ಧ್ವಜ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕೃತರಾದ ಮಂಗಳೂರಿನ ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಾರ್ಯ ಗ್ರಾಮದ ಪ್ರವೀಣ. ಯಂ ಇವರನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಟ್ರಸ್ಟ್ ಅಧ್ಯಕ್ಷರಾದ ಭಾಸ್ಕರ ಬಾರ್ಯ ದೇವಳದ ಅಭಿವೃದ್ಧಿಯಲ್ಲಿ ಭಕ್ತರ ಸಹಕಾರವನ್ನು ಕೃತಜ್ಞತೆಯಿಂದ ಸ್ಮರಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುವಂತಾಗಲಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಅದಮಗುತ್ತು ಬಟ್ಯಪ್ಪ ಪೂಜಾರಿ ಮತ್ತು ಬಾರ್ಯಗುತ್ತು ಶೇಷಪ್ಪ ಸಾಲಿಯಾನ್ ಉಪಸ್ಥಿತರಿದ್ದರು. ದೇವಳದ ಟ್ರಸ್ಟಿಗಳಾದ ಶ್ರೀಮತಿ ಇಂದಿರಾ ಮತ್ತು ಸುದರ್ಶನ. ಕೆ ಸನ್ಮಾನ ಪತ್ರ ವಾಚಿಸಿದರು.
ಬಾರ್ಯ ಸಿ.ಎ ಬ್ಯಾಂಕಿನ ನಿರ್ದೇಶಕರಾದ ರಾಜೇಶ್ ರೈ ಸ್ವಾಗತಿಸಿ ದೇವಳದ ಟ್ರಸ್ಟಿ ಶಿವರಾಮ ನಾಯ್ಕ್ ವಂದಿಸಿದರು. ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿಗಳಾದ ಬಿ.ಎನ್ ರಾಜೇಶ್ ರಾವ್ ಮತ್ತು ಪ್ರಶಾಂತ ಪೈ ಸಹಕರಿಸಿದರು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಿದ ಮಹಾವಿಷ್ಣುಯಾಗದಲ್ಲಿ ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ ಮತ್ತು ದೇವಳದ ಟ್ರಸ್ಟಿಗಳು, ಹತ್ತು ಸಮಸ್ತರು ಮತ್ತು ಭಕ್ತಾದಿಗಳು ಭಾಗವಹಿಸಿದ್ದರು. ಪ್ರಸಾದ ವಿತರಣೆಯೊಂದಿಗೆ ಅನ್ನ ಸಂತರ್ಪಣೆಯು ಜರಗಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹಿಂದಾರು ಸಾಯಿ ಭಗವಾನ್ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ | ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಕಾರ್ಯಕ್ರಮ

ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಇದರ…

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…