ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.
ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಬಾಗ ಮುರಿದು ಬಿದ್ದಿದೆ.
ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಇದ್ದರು. ಅರ್ಚಕರು ರಥದಲ್ಲೇ ಇದ್ದರು. ಆದರೆ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ ದೇವಿಯನ್ನು ಚಂದ್ರಮಂಡಲ ರಥದಲ್ಲಿ ಕೂರಿಸಿ ಉತ್ಸವ ಮುಂದುವರಿಸಿ ವಿಧಿವಿಧಾನಗಳನ್ನು ನೆರವೇರಿಸಲಾಯಿತು.






















