ಧಾರ್ಮಿಕ

ದೇಲಂಪಾಡಿ: ಪಾರ್ತಿಸುಬ್ಬ ವಿರಚಿತ ಪಂಚವಟಿ ಯಕ್ಷಗಾನ ತಾಳಮದ್ದಳೆ, ಭಗವದ್ಗೀತೆ ಪಾರಾಯಣ

GL
ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಮತ್ತು ಮನೆಯವರ ವತಿಯಿಂದ ಪಾರ್ತಿಸುಬ್ಬ ವಿರಚಿತ ಪಂಚವಟಿ ಯಕ್ಷಗಾನ ತಾಳಮದ್ದಳೆ ಜರುಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಮತ್ತು ಮನೆಯವರ ವತಿಯಿಂದ ಪಾರ್ತಿಸುಬ್ಬ ವಿರಚಿತ ಪಂಚವಟಿ ಯಕ್ಷಗಾನ ತಾಳಮದ್ದಳೆ ಜರುಗಿತು.

chennai-shopping
maithri

ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣ ದೇವರಿಗೆ ಪೂಜಾರ್ಚನೆ ನಡೆದು, ಶೀರಾಮ ಗೀತಾಭ್ಯಾಸ ತಂಡ ಹಾಗೂ ಪೂರ್ಣಿಮಾ ಬನಾರಿ ಅವರ ಸಹಭಾಗಿತ್ವದಲ್ಲಿ ಭಗವದ್ಗೀತೆ ಪಾರಾಯಣ ನಡೆಯಿತು.

ಅನಂತರ ಹಿರಿಯ ಭಾಗವತ ಗುರು ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಯಕ್ಷಗಾನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮೋಹನ ಮೆಣಸಿನಕಾನ, ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ, ಕುಮಾರಿ ರಂಜಿತಾ ಆಚಾರ್ಯ ನಾರ್ಣಕಜೆ  ಹಾಗೂ ಚೆಂಡೆಮದ್ದಳೆ ವಾದನದಲ್ಲಿ ಶ್ರೀಧರ ಆಚಾರ್ಯ ಈಶ್ವರ ಮಂಗಲ, ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ, ಸದಾನಂದ ಮಯ್ಯಾಳ ಅವರು ಸಹಕರಿಸಿದರು.

ಅರ್ಥಧಾರಿಗಳಾಗಿ  ನಾರಾಯಣ ದೇಲಂಪಾಡಿ, ಪ್ರಭಾಕರ ಆಚಾರ್ಯ ಹಿರಿಯಾಣ, ಭಾಸ್ಕರ ಮಾಸ್ತರ್‌ ದೇಲಂಪಾಡಿ, ನಾರಾಯಣ ಪಾಟಾಳಿ ಪಯ್ಯಾಳ, ಪೂಜಾ ಸಿ.ಎಚ್‌. ದೇಲಂಪಾಡಿ, ಶ್ರೀದೇವ್‌ ಆಚಾರ್ಯ ಈಶ್ವರ ಮಂಗಲ, ಶಾಂತಾ ಕುಮಾರಿ ದೇಲಂಪಾಡಿ, ಬಿ.ಎಚ್.‌ ವೆಂಕಪ್ಪ ಗೌಡ, ಸಂಜೀವ ರಾವ್‌ ಮಯ್ಯಾಳ, ಪದ್ಮನಾಭ ಮಯ್ಯಾಳ ಭಾಗವಹಿಸಿರು.

ಪೂಜಾ ಸಿ.ಎಚ್‌ ಕಾರ್ಯಕ್ರಮ ನಿರೂಪಿಸಿ, ನಂದ ಕಿಶೋರ ಬನಾರಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಡಿ. 7, 8: ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ ಶಾರದಾಂಬ ಭಜನಾ ಮಂದಿರದ 3ನೇ ಪ್ರತಿಷ್ಠಾ ವಾರ್ಷಿಕೋತ್ಸವ, ಅಯ್ಯಪ್ಪ ದೀಪೋತ್ಸವ

ಪುತ್ತೂರು: ನೆಟ್ಟಣಿಗೆಮುಡ್ನೂರು ಗ್ರಾಮದ ಈಶ್ವರಮಂಗಲ ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ-ಶಾರದಾಂಭ…