ಧಾರ್ಮಿಕ

ನಾಳೆ ಪಡುಕುತ್ಯಾರು ಆನೆಗುಂದಿ ಮಠಕ್ಕೆ ಪುತ್ತೂರಿನಿಂದ ಬೆಳ್ಳಿಯ ಹರಿವಾಣ, ಪಾದುಕೆ, ಪೀಠ ಸಮರ್ಪಣೆ | ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಪುಷ್ಪಾರ್ಚನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಜಿಯವರ 21ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭ ಸಮರ್ಪಣೆ ಆಗಲಿರುವ ಬೆಳ್ಳಿಯ ಹರಿವಾಣ, ಪಾದುಕೆ, ಪೀಠದ ವೀಕ್ಷಣೆ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಗುರುವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು.

chennai-shopping
maithri

vishwakarma

ಸೆ. 5ರ ಶುಕ್ರವಾರ ಪಡುಕುತ್ಯಾರು ಮಠದಲ್ಲಿ ಬೆಳ್ಳಿಯ ಹರಿವಾಣ, ಪಾದುಕೆ, ಪೀಠ ಸಮರ್ಪಣೆ ಆಗಲಿದೆ.

ಪುರೋಹಿತ ವೇ ಮೂ ವಿಶ್ವೇಶ್ವರ ಬಾಳಿಲ ಅವರು ದೀಪ ಪ್ರಜ್ವಲಿಸಿ ಪ್ರಾರ್ಥನೆ ಮಾಡಿದರು.

ಈ ಸಂದರ್ಭ ಗುರುಸೇವಾ ಪರಿಷತ್‌ ಪುತ್ತೂರು ಮಹಾಮಂಡಲ ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ, ಕಾರ್ಯದರ್ಶಿ ನಿರಂಜನ ಆಚಾರ್ಯ ಮರೀಲು, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ, ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ರಜತ ಪೀಠದ ದಾನಿ ಶ್ರೀಧರ್ ಆಚಾರ್ಯ, ಅವರ ಸಹೋದರ ದಾಮೋದರ್ ಆಚಾರ್ಯ, ಪುತ್ರ ಗಣೇಶ್ ಎನ್. ಕಲ್ಲರ್ಪೆ ದಂಪತಿ, ಮಹಿಳಾ ಸಂಘದ ಅಧ್ಯಕ್ಷೆಇಂದಿರಾ ಪುರುಷೋತ್ತಮ ಆಚಾರ್ಯ, ಶ್ರೀರತ್ನ ಜ್ಯುವೆಲ್ಸ್ ಮಾಲಕ ರಾಜೇಶ್ ಎನ್., ಲಲಿತಾ ಕೊಣಾಜೆ ಮೊದಲಾದವರು ಉಪಸ್ಥಿತರಿದ್ದರು.

ಸಮಾಜ ಬಾಂಧವರು ಪಾದುಕೆ, ಹರಿವಾಣ ಮತ್ತು ಪೀಠಕ್ಕೆ ಪುಷ್ಪಾರ್ಚನೆ ಮಾಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಡಿ. 7, 8: ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ ಶಾರದಾಂಬ ಭಜನಾ ಮಂದಿರದ 3ನೇ ಪ್ರತಿಷ್ಠಾ ವಾರ್ಷಿಕೋತ್ಸವ, ಅಯ್ಯಪ್ಪ ದೀಪೋತ್ಸವ

ಪುತ್ತೂರು: ನೆಟ್ಟಣಿಗೆಮುಡ್ನೂರು ಗ್ರಾಮದ ಈಶ್ವರಮಂಗಲ ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ-ಶಾರದಾಂಭ…