ಧಾರ್ಮಿಕ

ನಾಳೆ ಉಪ್ಪಿನಂಗಡಿಯಲ್ಲಿ 30ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ವಿಶ್ವಕರ್ಮ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ಕಾಳಿಕಾಂಬಾ ಮಹಿಳಾ ಸಂಘದ ಸಹಕಾರದಲ್ಲಿ ಸೆ. 16ರ ಮಂಗಳವಾರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ 30ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆ ನಡೆಯಲಿದೆ.

chennai-shopping
maithri

ಪುರೋಹಿತ್ ವಿ. ಪ್ರಕಾಶ ಆಚಾರ್ಯ ವೇಣೂರು ಅವರ ಆಚಾರ್ಯತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 8ರಿಂದ ಸಾಮೂಹಿಕ ಪ್ರಾರ್ಥನೆ ಮತ್ತು ವಿಶ್ವಕರ್ಮ ಪೂಜೆ ಪ್ರಾರಂಭ. 10ರಿಂದ ಧಾರ್ಮಿಕ ಸಭೆ ಮತ್ತು ಸನ್ಮಾನ, ಅಭಿನಂದನೆ, ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಹರೀಶ್ ಆಚಾರ್ಯ ಪುಳಿತ್ತಡಿ ಅಧ್ಯಕ್ಷತೆ ವಹಿಸಲಿರುವರು. ದಿನೇಶ್ ಯು. ಆಚಾರ್ಯ ಚಂದ್ರ ಫ್ಯಾನ್ಸಿ ಪುತ್ತೂರು, ಜ್ಯೋತಿ ದಿನೇಶ ಆಚಾರ್ಯ ಸಹಶಿಕ್ಷಕಿ ಸ.ಪ್ರೌ. ಶಾಲೆ ಶಾಂತಿನಗರ ಅತಿಥಿಗಳಾಗಿರುವರು.

ರಾಮಚಂದ್ರ ಆಚಾರ್ಯ ಕಾಷ್ಠಶಿಲ್ಪಿಗಳು ಕೊಳ್ಕೊಟ್ಟು ನೆಲ್ಯಾಡಿ, ಸುರಕ್ಷಾ ಆಚಾರ್ಯ ಕನ್ನಾಜೆ ಡಾಟ್ ಮಂಡಲ ಆರ್ಟ್ ಕಲಾವಿದೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ರೆಕಾರ್ಡ್ ಆಫ್ ಇಂಡಿಯಾ ಹೋಲ್ಡರ್ ಅವರನ್ನು ಸನ್ಮಾನಿಸಲಾಗುವುದು.

ಮಧ್ಯಾಹ್ನ ಗಂಟೆ 1.30ರಿಂದ ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪೂಜೆಗೆ ಹೂವಿನ ಮಾಲೆ ತರುವವರು ಮನೆಯಲ್ಲಿಯೇ ತಯಾರಿಸಿ ಬೆಳಿಗ್ಗೆ ಗಂಟೆ 9-30ರ ಒಳಗೆ ತರಬೇಕಾಗಿ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಡಿ. 7, 8: ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ ಶಾರದಾಂಬ ಭಜನಾ ಮಂದಿರದ 3ನೇ ಪ್ರತಿಷ್ಠಾ ವಾರ್ಷಿಕೋತ್ಸವ, ಅಯ್ಯಪ್ಪ ದೀಪೋತ್ಸವ

ಪುತ್ತೂರು: ನೆಟ್ಟಣಿಗೆಮುಡ್ನೂರು ಗ್ರಾಮದ ಈಶ್ವರಮಂಗಲ ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ-ಶಾರದಾಂಭ…