ಧಾರ್ಮಿಕ

ಬೊಳುವಾರು ಆಂಜನೇಯ ಯಕ್ಷಗಾನ ಸಂಘದ 57 ನೇ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಶ್ರೀ ಆಂಜನೇಯ 57 ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ಈಶ್ವರ ಭಟ್ ಪಂಜಿಗುಡ್ಢೆ ಬಿಡುಗಡೆಗೊಳಿಸಿ ಶುಭಹಾರೈಸಿದರು.

Shani-pooja

ಡಿಸೆಂಬರ್ 25ರಂದು ಪುತ್ತೂರಿನ ನಟರಾಜ ವೇದಿಕೆಯಲ್ಲಿ ವಾರ್ಷಿಕೋತ್ಸವ ಸಮಾರಂಭ ಜರಗಲಿದೆ.

ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಿಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಸಂಘದ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಪಂಚವಟಿ ತಾಳಮದ್ದಳೆ ಜರಗಿತು. ಭಾಗವತರಾಗಿ ಯಲ್. ಯನ್. ಭಟ್ ಬಟ್ಯಮೂಲೆ , ನಿತೀಶ್ ಎಂಕಣ್ಣಮೂಲೆ, ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ , ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ, ಸಮರ್ಥ ವಿಷ್ಣು, ಅನೀಶ್ ಕೃಷ್ಣ ಪುಣಚ ಹಾಗೂ ಅರ್ಥದಾರಿಗಳಾಗಿ ಗುಂಡ್ಯಡ್ಕ ಈಶ್ವರ ಭಟ್ (ಶ್ರೀರಾಮ), ಭಾಸ್ಕರ ಬಾರ್ಯ(ಮುನಿಗಳು)  ದುಗ್ಗಪ್ಪ ನಡುಗಲ್ಲು( ಲಕ್ಷ್ಮಣ )  ಮಾಂಬಾಡಿ ವೇಣುಗೋಪಾಲ ಭಟ್ ( ಸೀತೆ) ಗುಡ್ಡಪ್ಪ ಬಲ್ಯ (ಘೋರ ಶೂರ್ಪನಖ) ಭಾಸ್ಕರ ಶೆಟ್ಟಿ ಸಾಲ್ಮರ  (ಮಾಯಾ ಶೂರ್ಪನಖಿ ) ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…