ಧಾರ್ಮಿಕ

ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಆರ್ ಆರ್ ಸ್ಕ್ರ್ಯಾಪ್ ಮಾಲಕ ಎಸ್.ಎ. ಇಸ್ಮಾಯಿಲ್

GL

ಈ ಸುದ್ದಿಯನ್ನು ಶೇರ್ ಮಾಡಿ

ಮಾಣಿ: ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ವಾರ್ಷಿಕ ಮಹಾಸಭೆ ಮದ್ರಸಾ ಹಾಲ್ ನಲ್ಲಿ ನಡೆಯಿತು.

chennai-shopping
maithri

ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅವರ ಅಧ್ಯಕ್ಷತೆ ವಹಿಸಿದ್ದರು. ಖತೀಬ್ ಹಸೈನಾರ್ ಸ‌ಅದಿ ಪೆರ್ಲ ದುಆ ನೆರವೇರಿಸಿದರು.

ಕಾರ್ಯದರ್ಶಿ ಅಮೀರುದ್ದೀನ್ ಮತ್ತು ಜೊತೆ ಕಾರ್ಯದರ್ಶಿ ಕರೀಂ ನೆಲ್ಲಿ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.

ಇದೇ ಸಂದರ್ಭ ಸಭೆಯ ಅನುಮೋದನೆ ಪಡೆದು ಹಾಲಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಎಸ್ ಎ ಇಸ್ಮಾಯಿಲ್, ಉಪಾಧ್ಯಕ್ಷರಾಗಿ ಹಂಝ ಕಾಯರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಮೀರುದ್ದೀನ್, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಆದರ್ಶ ಮಾಣಿ, ಮತ್ತು ಮೂಸಾ ಕರೀಂ ಮಾಣಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್‌ ಹಮೀದ್ ನೆಲ್ಲಿ,ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ, ಯೂಸುಫ್ ಹಾಜಿ ಸೂರಿಕುಮೇರು, ಅಝೀಂ ನೆಲ್ಲಿ, ಮುಹಮ್ಮದಾಲಿ ಮುಸ್ಲಿಯಾರ್, ಅಬ್ದುಲ್ ರಹ್ಮಾನ್ ಪುತ್ತು, ಬಶೀರ್ ಮಾಣಿ, ಅಬ್ದುಲ್ ಖಾದರ್ ಮಾಣಿ, ಇಬ್ರಾಹಿಂ ನೆಲ್ಲಿ, ಅಬ್ದುಲ್ ಲತೀಫ್ ಗುಡ್ಡೆ, ನಾಸೀರ್ ಬದ್ರಿಯಾ ಗ್ರೌಂಡ್, ಸುಲೈಮಾನ್ ಕುಕ್ಕಿಲ ಆಯ್ಕೆಯಾದರು.

ಚುನಾವಣಾ ವೀಕ್ಷಕರಾಗಿ ಹಾಜಿ ಮುಹಮ್ಮದ್ ಬಂಡಾಡಿ ಮತ್ತು ಎಸ್ ಎ ಉಮ್ಮರ್ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…