ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ವಿಧಿವಿಧಾನ ನಡೆಯಿತು.
ಬೆಳಿಗ್ಗೆ 9 ಗಂಟೆಯಿಂದ ತೋರಣ ಮುಹೂರ್ತ, ವಿಮಾನ ಶುದ್ಧಿ, ಷೋಡಶ ಕಲಶಾಭಿಷೇಕ ನಡೆಯಿತು. ಸಂಜೆ ಗಂಟೆಯಿಂದ ನಾಂದಿಮಂಗಲ ಕಾರ್ಯಕ್ರಮ ನಡೆಯಿತು.
105 ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಭಾಗವಹಿಸಿದ್ದರು.
ನಾಳೆ ಪಾದಾಭಿಷೇಕ:
ಮಂಗಳವಾರ ಬೆಳಿಗ್ಗೆ 8.30ಕ್ಕೆ ಬೀಡಿನಿಂದ ರತ್ನಗಿರಿಗೆ ಅಗ್ರೋದಕ ಮೆರವಣಿಗೆ ತೆರಳಿ ಬಳಿಕ 216 ಕಲಶಗಳಿಂದ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಪೂಜ್ಯ ಲಲಿಕೀರ್ತಿಭಟ್ಟಾರಕರ ಸ್ವಾಮೀಜಿ ಮಂಗಲಪ್ರವಚನ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





















