ಧಾರ್ಮಿಕ

ಚಂದ್ರಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದರ್ಶನ ಸಮಯ ಬದಲಾವಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ: ಮಾರ್ಚ್ 3 ರಂದು ಸಂಭವಿಸಲಿರುವ ರಕ್ತ ಚಂದ್ರಗ್ರಹಣದ ಹಿನ್ನೆಲೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ದರ್ಶನ ಸಮಯದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

maithri

ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಿಸಿದ ಅಧಿಕೃತ ಮಾಹಿತಿಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30 ಗಂಟೆಯವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ನಂತರ ಚಂದ್ರಗ್ರಹಣದ ಅವಧಿ ಮುಗಿದ ಬಳಿಕ, ರಾತ್ರಿ 7:30 ಗಂಟೆಯಿಂದ ಪುನಃ ದರ್ಶನ ಪ್ರಾರಂಭವಾಗಲಿದೆ.

ಗ್ರಹಣದ ಸಂದರ್ಭಗಳಲ್ಲಿ ಬಹುತೇಕ ದೇವಸ್ಥಾನಗಳಲ್ಲಿ ದರ್ಶನಕ್ಕೆ ನಿರ್ಬಂಧ ಇರುವ ನಿಯಮದಂತೆ, ಭಕ್ತರ ಅನುಕೂಲತೆ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಭಕ್ತಾದಿಗಳು ದರ್ಶನಕ್ಕೆ ಆಗಮಿಸುವ ಮೊದಲು ಬದಲಾದ ಸಮಯವನ್ನು ಗಮನದಲ್ಲಿಟ್ಟುಕೊಳ್ಳುವಂತೆ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಅವರ ಹೆಸರನ್ನಿಡುವಂತೆ ಗೆಜ್ಜೆಗಿರಿ ಸಮಿತಿ ಮನವಿ

ಉಪ್ಪಿನಂಗಡಿ ಮುಖ್ಯ ರಸ್ತೆಯ ವೃತ್ತಕ್ಕೆ ವೀರ ಉಬಾರ್ ಮಂಜ ಬೈದ್ಯರ ತ್ಯಾಗವನ್ನು ಸಾರುವ ಸಲುವಾಗಿ…

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…