ಧಾರ್ಮಿಕ

ಪುತ್ತೂರು ದೇವಳದ ಸಭಾಭವನದಲ್ಲಿ ಕಾಂಗ್ರೆಸ್ ಸಭೆ: ವಿಹಿಂಪ ಖಂಡನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಇದರ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿದ್ದು, ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಪ್ರಸನ್ನ ಆಗ್ರಹಿಸಿದ್ದಾರೆ.

chennai-shopping
maithri

ದಿನಾಂಕ 08-03-2026 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ತಾನದ ಸಭಾಭವನದಲ್ಲಿ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ಇದರ ವತಿಯಿಂದ ಮಹಿಳಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ದೇವಸ್ಥಾನದ ಪವಿತ್ರ ಅವರಣದಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸುವುದು ದೇವಸ್ಥಾನದ ಧಾರ್ಮಿಕ ಸ್ವರೂಪಕ್ಕೆ ಧಕ್ಕೆ ತರುವಂತದ್ದು ಮತ್ತು ಮೇಲ್ಕಂಡ ಕಾಯ್ದೆಯ ಉದ್ದೇಶ ಹಾಗೂ ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಈ ಕಾರ್ಯಕ್ರಮದಲ್ಲಿ ಅನ್ಯಧರ್ಮದ ವ್ಯಕ್ತಿಗಳು ಕೂಡ ಭಾಗಿಯಾಗಿರುವುದು ದೇವಸ್ಥಾನದ ಭಕ್ತರಾದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಕಾರ್ಯ ನಡೆದಿರುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನ್ಯಧರ್ಮದವರನ್ನು ದೇವಸ್ಥಾನದ ವೇದಿಕೆಯಲ್ಲಿ ಕುಳ್ಳಿರಿಸಿ ರಾಜಕೀಯ ಕಾರ್ಯ ಕ್ರಮ ಮಾಡಿದ ಕಾಂಗ್ರೆಸ್ ಕೃತ್ಯವನ್ನು ವಿಶ್ವಹಿಂದೂ ಪರಿಷತ್ ಭಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…