ಧಾರ್ಮಿಕ

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ ಹೆಚ್ಚಾಗುವ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸುರಕ್ಷತಾ ಕಾರ್ಯಗಳನ್ನು ಕೈಗೊಂಡಿದ್ದಾರೆ.

chennai-shopping
maithri

ಏಪ್ರಿಲ್ 10ರಿಂದ ಆರಂಭವಾಗುವ ದೇವರ ಪೇಟೆ ಸವಾರಿಯ ಸಂದರ್ಭ ಯಾವುದೇ ಅನಾಹುತ ಸಂಭವಿಸದಂತೆ ಎಚ್‌ಟಿ (ಹೈ ಟೆನ್ಷನ್) ಹಾಗೂ ಎಲ್‌ಟಿ (ಲೋ ಟೆನ್ಷನ್) ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದ ಹಾಗೂ ತಂತಿಗಳಿಗೆ ತಗುಲಿ ವಾಲಿ ನಿಂತಿದ್ದ ಮರದ ಕೊಂಬೆಗಳು ಮತ್ತು ಗೆಲ್ಲುಗಳನ್ನು ಕಡಿದು ತೆರವುಗೊಳಿಸಲಾಯಿತು. ವಿದ್ಯುತ್ ತಂತಿಗಳ ಸಂಪರ್ಕದಿಂದ ಉಂಟಾಗಬಹುದಾದ ಅಪಾಯಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಹಾರಾಡಿ ರೈಲ್ವೆ ಬ್ರಿಡ್ಜ್ ಪಾಯಿಂಟ್‌ನಿಂದ ಬೊಳುವಾರು ಬಂಟರ ಭವನ, ಮಹಾಲಿಂಗೇಶ್ವರ ಐಟಿಐ, ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಹಾಗೂ ಬೊಳುವಾರು ಕರ್ಮಲ್ ಹೋಂಡಾ ಶೋರೂಮ್‌ವರೆಗೆ ವ್ಯಾಪಕವಾಗಿ ಮರದ ಕೊಂಬೆಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು.

ಸಹಾಯಕ ಇಂಜಿನಿಯರ್ ರಾಜೇಶ್ ಕೆ. ಅವರ ನೇತೃತ್ವದಲ್ಲಿ ಜೂನಿಯರ್ ಇಂಜಿನಿಯರ್ ದುರ್ಗಾ ಸಿಂಗ್, ದಿನೇಶ್ ಮೇಸ್ತ್ರಿ, ವಿಶ್ವನಾಥ್ ಮೇಸ್ತ್ರಿ ಹಾಗೂ ಪವರ್‌ಮೆನ್‌ಗಳಾದ ಸಂತೋಷ್ ಜಾದವ್, ಲಕ್ಷ್ಮಣ್, ಸಂತೋಷ್ ಮಲಿಯಪ್ಪ, ಗಂದಪ್ಪ ಶಿರೂರು, ಶಂಕರ ಗೌಡ ಪಾಟೀಲ್, ಬಸವರಾಜ್ ಸೇರಿದಂತೆ ಸಿಬ್ಬಂದಿ ಈ ಕಾರ್ಯದಲ್ಲಿ ಭಾಗವಹಿಸಿದ್ದರು.

ಜಾತ್ರೋತ್ಸವದ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಇಂತಹ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೆಸ್ಕಾಂ ಮೂಲಗಳು ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಡಿ. 7, 8: ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ ಶಾರದಾಂಬ ಭಜನಾ ಮಂದಿರದ 3ನೇ ಪ್ರತಿಷ್ಠಾ ವಾರ್ಷಿಕೋತ್ಸವ, ಅಯ್ಯಪ್ಪ ದೀಪೋತ್ಸವ

ಪುತ್ತೂರು: ನೆಟ್ಟಣಿಗೆಮುಡ್ನೂರು ಗ್ರಾಮದ ಈಶ್ವರಮಂಗಲ ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ-ಶಾರದಾಂಭ…