ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂದೆ ನಿರ್ಮಾಣಗೊಂಡಿರುವ ನೂತನ ಕಟ್ಟೆಯನ್ನು ಭಾನುವಾರ ಬೆಳಿಗ್ಗೆ ದೇವರಿಗೆ ಸಮರ್ಪಿಸಲಾಯಿತು.

ಬೆಳಿಗ್ಗೆ ಗಣಪತಿ ಹವನ, ವಾಸ್ತು ಪೂಜೆ, ವಾಸ್ತು ಬಲಿ ಪೂಜೆ ನಡೆದು ಕಟ್ಟೆಯನ್ನು ದೇವರಿಗೆ ಸಮರ್ಪಿಸಲಾಯಿತು. ನಂತರ ದಾನಿಗಳನ್ನು ಗೌರವಿಸಲಾಯಿತು.
ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಸುಮಾರು 11.30ರ ಹೊತ್ತಿಗೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಪೂಜೆ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.






















