ಧಾರ್ಮಿಕ

ಬಳಂಜ ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹ ಭಿನ್ನಗೊಳಿಸಿದ ದುಷ್ಕರ್ಮಿ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬುಧವಾರ ರಾತ್ರಿ ನುಗ್ಗಿದ ಅಜಯ್ ಎಂಬಾತ ದೇವರ ವಿಗ್ರಹವನ್ನು ಭಗ್ನಗೊಳಿಸಿರುವ ಘಟನೆ ವರದಿಯಾಗಿದೆ.

maithri

ಬುಧವಾರ ರಾತ್ರಿ ಥಾರ್ ವಾಹನದಲ್ಲಿ ಬಂದ ಅಜಯ್, ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಎಂಬುವವರ ಮನೆಗೆ ತೆರಳಿ ‘ಎನ್ನನ್ ಬಚಾವ್ ಮಲ್ಪಿ’ (ನನ್ನನ್ನು ಉಳಿಸಿ) ಎಂದು ಜೋರಾಗಿ ಕೂಗುತ್ತಾ ಮನೆ ಪ್ರವೇಶಿಸಲು ಯತ್ನಿಸಿದ್ದಾನೆ. ಮನೆಯವರು ಆತನನ್ನು ಗದರಿಸಿ ಅಲ್ಲಿಂದ ಕಳುಹಿಸಿದ್ದಾರೆ.

ನಂತರ, ಆತ ಬಳಂಜ ದೇವಸ್ಥಾನದ ಪವಿತ್ರ ಜಳಕದ ಕೆರೆಗೆ ಹಾರಿ ಅಲ್ಲಿಂದ ನೇರವಾಗಿ ದೇವಸ್ಥಾನಕ್ಕೆ ಬಂದಿದ್ದಾನೆ. ಪಿಲ್ಲರ್ ಸಹಾಯದಿಂದ ದೇವಸ್ಥಾನದ ಮೇಲ್ಛಾವಣಿ ಏರಿ, ಹಂಚುಗಳನ್ನು ತೆಗೆದು ಒಳಪ್ರವೇಶಿಸಿದ್ದಾನೆ. ಬಳಿಕ ಕೊಡಮಣಿತ್ತಾಯ ದೈವದ ಸನ್ನಿಧಿಗೆ ಇಳಿದು, ಪೀಠದ ಮೇಲಿದ್ದ ಗಂಟೆಯನ್ನು ತೆಗೆದು ಹಂಚಿನ ಬಳಿ ಇಟ್ಟು ಅಪವಿತ್ರಗೊಳಿಸಿದ್ದಾನೆ.

ಅಷ್ಟೇ ಅಲ್ಲದೆ, ತೀರ್ಥ ಮಂಟಪದ ಬಳಿ ಇದ್ದ ದೊಡ್ಡ ಗಂಟೆಯನ್ನು ಬಾರಿಸಿ, ಶ್ರೀ ಗೋಪಾಲಕೃಷ್ಣ ದೇವರ ಗರ್ಭಗುಡಿಯನ್ನು ಪ್ರವೇಶಿಸಿದ್ದಾನೆ. ಅಲ್ಲಿ ಪೂಜಿಸಲ್ಪಡುತ್ತಿದ್ದ ವಿಗ್ರಹವನ್ನು ಹೊರತೆಗೆದು ನೆಲಕ್ಕೆ ಎಸೆದು ಭಿನ್ನಗೊಳಿಸಿದ್ದಾನೆ. ಅಲ್ಲದೆ ಗರ್ಭಗುಡಿಯಲ್ಲಿದ್ದ ಪೂಜಾ ಪರಿಕರಗಳನ್ನು ಎಲ್ಲೆಂದರಲ್ಲಿ ಎಸೆದು ಅಸ್ತವ್ಯಸ್ತಗೊಳಿಸಿದ್ದಾನೆ.

ಸ್ಥಳಕ್ಕೆ ಧಾವಿಸಿದ ವೇಣೂರು ಪೊಲೀಸರು ಅಜಯ್‌ನನ್ನು ವಿಚಾರಣೆ ನಡೆಸಿ, ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…