ಧಾರ್ಮಿಕ

ಮೇ 7ರಂದು ಪುತ್ತೂರಿಗೆ ಶೃಂಗೇರಿ ಶ್ರೀ ಆಗಮನ: ಬಂಟ ಸಮಾಜದಿಂದ ಗುರುವಂದನೆ, ಪಾದಪೂಜೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂಟ ಸಮಾಜಕ್ಕೆ ಗುರುಪೀಠವಾಗಿರುವ ಶೃಂಗೇರಿಯೊಂದಿಗೆ ಸಮುದಾಯದ ವಿಶೇಷ ಭಕ್ತಿ ಮತ್ತು ಗೌರವ ಸಂಬಂಧ ಮುಂದುವರಿದಿರುವ ಹಿನ್ನೆಲೆಯಲ್ಲಿ, ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ಗುರುವಂದನಾ ಸಮಿತಿ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.

chennai-shopping
maithri

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮೇ 6ರಂದು ಶ್ರೀಗಳು ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಭವ್ಯ ಸ್ವಾಗತ ಕೋರಲಾಗುವುದು. ಮೇ 7ರಂದು ಬಪ್ಪಳಿಗೆ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಗುರುವಂದನೆ ಮತ್ತು ಪಾದಪೂಜೆ ಕಾರ್ಯಕ್ರಮ ನಡೆಯಲಿದೆ ಎಂದರು.

ಬಂಟ ಸಮಾಜದ ಅನೇಕ ಕುಟುಂಬಗಳಲ್ಲಿ ಪ್ರಶ್ನಾ ಚಿಂತನೆ ಸಂದರ್ಭದಲ್ಲಿ ಗುರುಗಳ ಆಶೀರ್ವಾದ ಪಡೆಯುವ ಮಹತ್ವ ಹೆಚ್ಚಿದ್ದು, ಸಾಮಾನ್ಯವಾಗಿ ಶೃಂಗೇರಿ ಕ್ಷೇತ್ರಕ್ಕೆ ಭೇಟಿ ನೀಡಲಾಗುತ್ತದೆ. ಇಂತಹ ಸಂದರ್ಭದಲ್ಲಿ ಗುರುಗಳು ಪುತ್ತೂರಿಗೆ ಆಗಮಿಸುತ್ತಿರುವುದು ಅಪರೂಪದ ಅವಕಾಶವಾಗಿದ್ದು, ಸಮಾಜದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಾದ ಪಡೆಯುವಂತೆ ವಿನಂತಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಧರ್ಮಾಭ್ಯುದಯ ತಾಲೂಕು ಸಮಿತಿ ಅಧ್ಯಕ್ಷ ದಂಬೆಕಾನ ಸದಾಶಿವ ರೈ, ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಶೆಟ್ಟಿ, ನಿರ್ದೇಶಕರಾದ ರವಿಪ್ರಸಾದ್ ಶೆಟ್ಟಿ ಮತ್ತು ಗಂಗಾಧರ ರೈ ಎಲಿಕ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…