ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ಬನ್ನೂರು ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.
ಶ್ರೀ ಶನೀಶ್ವರ ಸನ್ನಿಧಿಯ ದಿನೇಶ್ ಸಾಲ್ಯಾನ್ ಅವರು ಪೂಜೆ ನೆರವೇರಿಸಿ, ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಬನ್ನೂರು ಬೂತ್ ಸಮಿತಿಯ ಅಧ್ಯಕ್ಷ ಮಹಾಬಲ ಪೂಜಾರಿ, ಪುತ್ತೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀನ್ ರೈ ಬನ್ನೂರು, ಪುತ್ತೂರು NSUI ಪ್ರಧಾನ ಕಾರ್ಯದರ್ಶಿ ಗಗನ್ ದೀಪ್ ಕರ್ಮಲ, ಪಕ್ಷದ ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.
























