tamanvi
ಧಾರ್ಮಿಕ

ಮಹಾಲಿಂಗೇಶ್ವರ ದೇವರಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಂದ ಸ್ವರ್ಣ ಸಮರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಸ್ವರ್ಣ ಕವಚ ನಿರ್ಮಾಣಕ್ಕೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು 2 ಗ್ರಾಂ ಸ್ವರ್ಣವನ್ನು ಸಮರ್ಪಿಸಿದರು.

ಆ.30ರಂದು ಬೆಳಗ್ಗೆ ಶಕುಂತಳಾ ಶೆಟ್ಟಿ ಅವರು ತಮ್ಮ ಮಕ್ಕಳೊಂದಿಗೆ ದೇವಳಕ್ಕೆ ಆಗಮಿಸಿ ಶ್ರೀ ದೇವರಿಗೆ ಸ್ವರ್ಣ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇ.ಮೂ. ವಸಂತ ಕೆದಿಲಾಯ ಅವರು ಪ್ರಸಾದ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ದೇವಳದ ಗೌರವಾರ್ಥ ಶಕುಂತಳಾ ಶೆಟ್ಟಿಯವರಿಗೆ ಶಾಲು ಹೊದಿಸಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts