ಧಾರ್ಮಿಕ

ಪರ್ಪುಂಜ: ರಾಮಜಾಲು ಗರಡಿ ಜಾತ್ರೆ ಆರಂಭ;ಸಂಜೆ ಭಂಡಾರ ಆಗಮಿಸಿ, ಬ್ರಹ್ಮಬೈದರ್ಕಳ ನೇಮೋತ್ಸವ

ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಸಪ್ತದಶ ಸಂಭ್ರಮ ಶನಿವಾರ ಬೆಳಗ್ಗಿನಿಂದಲೇ ಆರಂಭಗೊಂಡಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಸಪ್ತದಶ ಸಂಭ್ರಮ ಶನಿವಾರ ಬೆಳಗ್ಗಿನಿಂದಲೇ ಆರಂಭಗೊಂಡಿತು.

ಸಂಜೆ 4 ಗಂಟೆಗೆ ಕೂರೇಲು ತರವಾಡು ಮನೆಯಿಂದ ಭಂಡಾರ ಆಗಮನವಾಗಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ ಜರಗಲಿದೆ. ಬಳಿಕ ಬೈದೇರುಗಳು ಗರಡಿ ಇಳಿಯುವುದು, ಸುಡುಮದ್ದು ಪ್ರದರ್ಶನ, ಬೈದೇರುಗಳ ಮೀಸೆ ಧರಿಸುವುದು, ಮಾಯಂದಾಲೆ ಗರಡಿ ಇಳಿಯುವುದು, ಬಳಿಕ ಚಾ ಪರ್ಕ ಕಲಾವಿದರಿಂದ ‘ಏರ್ಲಾ ಗ್ಯಾರೆಂಟಿ ಅತ್ತ್’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಬೆಳಿಗ್ಗೆ ಗಣಹೋಮ, ನಾಗದೇವರ ತಂಬಿಲ, ಬ್ರಹ್ಮೆರೆ ಗುಂಡದಲ್ಲಿ ಬ್ರಹ್ಮೆರೆ ಪೂಜೆ, ತಂಬಿಲ, ಕೋಟಿ – ಚೆನ್ನಯರಿಗೆ ನವಕ ಕಲಶ ಪೂಜೆ, ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ಬಳಿಕ ಅನ್ನಸಂತರ್ಪಣೆ ಆರಂಭಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ…

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…