Gl jewellers
ಧಾರ್ಮಿಕ

ಸಂಪ್ಯ ಜಾತ್ರೆ: ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ, ಪಲ್ಲಕ್ಕಿ ಉತ್ಸವ

Karpady sri subhramanya
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಭಾನುವಾರ ರಾತ್ರಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಭಾನುವಾರ ರಾತ್ರಿ ನಡೆಯಿತು.

ಸುರೇಶ್ ನಕ್ಷತ್ರಿತ್ತಾಯರ ಉಪಸ್ಥಿತಿಯಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ನಡೆಯಿತು.

Sampya jathre

ಭಾನುವಾರ ಬೆಳಿಗ್ಗೆಯಿಂದ ದೇವತಾ ಪ್ರಾರ್ಥನೆ, ಗಣಹೋಮ, ನಾಗತಂಬಿಲ, ಆಶ್ಲೇಷ ಬಲಿ, ದೈವ ತಂಬಿಲ, ಸತ್ಯನಾರಾಯಣ ಪೂಜೆ, ಶ್ರೀ ದೇವರಿಗೆ ಕಲಶಪೂಜೆ ಮತ್ತು ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಸಂಜೆ ಧೂಮಾವತಿ, ಗುಳಿಗ ದೈವಗಳ ಭಂಡಾರ ತೆಗೆದು ಶ್ರೀ ದೇವರ ಉತ್ಸವ ಬಲಿ ಆರಂಭಗೊಂಡಿತು. ಪಲ್ಲಕ್ಕಿ ಉತ್ಸವದ ಬಳಿಕ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಉತ್ಸವ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು, ಊರ – ಪರವೂರ ಭಕ್ತರು ಉಪಸ್ಥಿತರಿದ್ದರು.

ರಾತ್ರಿ ಧೂಮಾವತಿ, ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು: ಮಾ.1, 2 ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು…

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ | ಪುರಪ್ರವೇಶಿಸಿದ ನೂತನ ಪಲ್ಲಕ್ಕಿ; ನಾಳೆ ಸಮರ್ಪಣೆ

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ.…

ಕುಕ್ಕೆ ಸುಬ್ರಹ್ಮಣ್ಯ: ಹಿರಿಯ ನಾಗರಿಕರಿಕ ಮತ್ತು ಅಂಗವಿಕಲರಿಗೆ ಮೆಟ್ಟಿಲೇರಲು ಸ್ವಯಂಚಾಲಿತ  ಕ್ಯಾಂಪ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೆಟ್ಟಿಲು ಹತ್ತಲು-ಇಳಿಯಲು ಹಿರಿಯ ನಾಗರಿಕರು…