ಧಾರ್ಮಿಕ

ಒಂದು ಮನೆ ಬಿಟ್ಟು ಉಳಿದ ವಿವಾದಿತ ಮನೆಗಳ ತೆರವು!! ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಿಂಭಾಗದ ಮನೆಗಳ ಮೇಲೆ ಬಿದ್ದ ಮರ!

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ಹಿಂಭಾಗದಲ್ಲಿದ್ದ ವಿವಾದಿತ ಮನೆಗಳ ತೆರವು ಕಾರ್ಯ ಸೋಮವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ಹಿಂಭಾಗದಲ್ಲಿದ್ದ ವಿವಾದಿತ ಮನೆಗಳ ತೆರವು ಕಾರ್ಯ ಸೋಮವಾರ ನಡೆಯಿತು.

maithri

ದೇವಳ ಕೆರೆ ಸಮೀಪದಲ್ಲಿದ್ದ ಒಂದು ಮನೆಯನ್ನು ಹೊರತುಪಡಿಸಿ ಉಳಿದ ಐದು ಮನೆಗಳನ್ನು ಜೆಸಿಬಿ ಮೂಲಕ ತೆರವು ಮಾಡಲಾಯಿತು.

ಮರ ತೆರವು ವೇಳೆ ಮನೆಗಳ ಮೇಲೆ ಮರ ಬಿದ್ದ ಘಟನೆ ನಡೆದಿತ್ತು. ಬಳಿಕ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ ಅವರು, ಮರ ತೆರವು ಮಾಡುವಾಗ ಅನಿರೀಕ್ಷಿತವಾಗಿ ಮರ ಮನೆಗಳ ಮೇಲೆ ಬಿದ್ದಿದೆ. ಮನೆಯಲ್ಲಿ ಯಾರೂ ಇರಲಿಲ್ಲ. ಅವರೆಲ್ಲ ನಿನ್ನೆ ಸಂಜೆಯೇ ಮನೆಗಳನ್ನು ಖಾಲಿ ಮಾಡಿದ್ದಾರೆ ಎಂದರು.

ಬಾಡಿಗೆ ಮನೆಯಲ್ಲಿ ಒಟ್ಟು 11 ಮನೆಗಳಿತ್ತು. ಅವರೆಲ್ಲರಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಇದುವರೆಗೆ 17 ಲಕ್ಷ ರೂ.ವರೆಗೆ ಪರಿಹಾರ ನೀಡಲಾಗಿದೆ. ಆತ್ಮೀಯರಾದ ರಾಜೇಶ್ ಬನ್ನೂರು ಅವರ ಮನೆಯನ್ನು‌ ಬಿಟ್ಟು ಉಳಿದೆಲ್ಲಾ ಮನೆಗಳು ತೆರವಾಗಿದೆ ಎಂದರು.

ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…