ಧಾರ್ಮಿಕ

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ: ನಾಲ್ವರ ಸೆರೆ

GL
ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಲಡ್ಡು ಪ್ರಸಾದ ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 4 ಮಂದಿಯನ್ನು ಬಂಧಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಲಡ್ಡು ಪ್ರಸಾದ ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 4 ಮಂದಿಯನ್ನು ಬಂಧಿಸಿದೆ.

chennai-shopping
maithri

ಬಂಧಿತರಲ್ಲಿ ಎ.ಆರ್ ಡೈರಿ ಮಾಲೀಕ ಆ್ಯಂಡಿ ರಾಜಶೇಖರನ್, ಉತ್ತರ ಪ್ರದೇಶದ ಪರಾಗ್ ಡೈರಿ, ಪ್ರೀಮಿಯರ್ ಅಗೋ ಫುಡ್ಸ್ ಮತ್ತು ಆಲ್ಫಾ ಮಿಲ್ಕ್ ಫುಡ್ಸ್‌ನ ಪ್ರಮುಖರನ್ನು 3 ದಿನಗಳಿಂದ ತಿರುಪತಿಯಲ್ಲಿ ವಿಚಾರಣೆ ನಡೆಸಲಾಗುತ್ತಿತ್ತು. ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಹೇಳಿದೆ. ಬಂಧಿತರನ್ನು ಸೋಮವಾರ ತಿರುಪತಿಯ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

ನಿಯಮಗಳನ್ನು ಮೀರಿ ಲಡ್ಡು ಪ್ರಸಾದ ತಯಾರಿಕೆಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಪೂರೈಕೆ ಮಾಡಿದ ಆರೋಪವನ್ನು ಬಂಧಿತರ ವಿರುದ್ಧ ಹೊರಿಸಲಾಗಿದೆ. ಜತೆಗೆ ಅವರು ಭಾಗಿಯಾಗಿರುವ ಬಗ್ಗೆ ಪ್ರಾಥಮಿಕ ಮಟ್ಟದಲ್ಲಿ ಪುರಾವೆಗಳೂ ಇವೆ ಎನ್ನಲಾಗಿದೆ. ಉತ್ತರ ಭಾರತದ ರಾಜ್ಯಗಳಿಂದ ತುಪ್ಪ ಖರೀದಿ ಬಗ್ಗೆ ಟಿಟಿಡಿ ಮಾಡಿಕೊಂಡಿರುವ ಒಪ್ಪಂದದಲ್ಲೂ ಈ ಸಂಸ್ಥೆಗಳು ಅವ್ಯವಹಾರ ನಡೆಸಿವೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…