ಧಾರ್ಮಿಕ

ಬಾರ್ಯ ದೇವಸ್ಥಾನದ ಪ್ರತಿಷ್ಠಾ ದಿನೋತ್ಸವ

GL
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವವು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳಲ್ಲಿ ಜರಗಿತು

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವವು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳಲ್ಲಿ ಜರಗಿತು.

ಫೆಬ್ರವರಿ 6ರಂದು ಸುತ್ತಮುತ್ತಲಿನ ಗ್ರಾಮಗಳಿಂದ ಹೊರೆಕಾಣಿಕೆ, ‌ಮಹಾಪೂಜೆ ಅನ್ನಸಂತರ್ಪಣೆ,ಭಜನೆ ಮಹಾರಂಗಪೂಜೆ ಬಳಿಕ ನಾಗ ಮಾಣಿಕ್ಯ ನಾಟಕ ನಡೆಯಿತು.

ಮರುದಿನ ಕೆಮ್ಮಿಂಜೆ ಬ್ರಹ್ಮ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಗಣಹೋಮ, ಪಂಚ ವಿಂಶತಿ ಕಲಶಾಭಿಶೇಕ, ಪರಿವಾರ ದೈವಗಳಿಗೆ ಕಲಶ ತಂಬಿಲ, ಶ್ರೀ ಆಂಜನೇಯ ಯಕ್ಷಗಾನ ಮಹಿಳಾ ಸಂಘ ಬೊಳುವಾರು ಪುತ್ತೂರು ಇವರಿಂದ ಶ್ಯಮಂತಕ ಮಣಿ ತಾಳಮದ್ದಳೆ, ದೇವರ ಬಲಿ ಉತ್ಸವ, ದರ್ಶನ ಬಲಿ ,ಬಟ್ಟಲು ಕಾಣಿಕೆ‌ ನಡೆಯಿತು.

ಆಡಳಿತ ಟ್ರಸ್ಟಿನ ಅಧ್ಯಕ್ಷ ಭಾಸ್ಕರ್ ಬಾರ್ಯ ಗುರಿಕಾತ್ವದಲ್ಲಿ ಟ್ರಸ್ಟಿ ಮತ್ತು ಪದಾಧಿಕಾರಿಗಳು ಮತ್ತು ಒಂಭತ್ತು ಗುತ್ತಿನ ಮನೆಯವರ ಉಪಸ್ಥಿತಿಯಲ್ಲಿ ಗ್ರಾಮದೈವ ಪಂಜುರ್ಲಿಯ ನೇಮ ಜರಗಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…