tamanvi
ಧಾರ್ಮಿಕ

ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉತ್ಸವ, ದರ್ಶನ ಬಲಿ |ಇಂದು ರಾತ್ರಿ ಕಲ್ಲುರ್ಟಿ, ಗುಳಿಗ ದೈವಗಳ ನೇಮ

D_shiva_bhat
ಬನ್ನೂರಿನ ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಫೆ.22ರಂದು ರಾತ್ರಿ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬನ್ನೂರಿನ ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಫೆ.22ರಂದು ರಾತ್ರಿ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.

maithri

ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಸಂಗಮ್ ಬ್ರದರ್ಸ್ ಪುತ್ತೂರು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ರಾತ್ರಿ ಶ್ರೀ ದೇವರ ಉತ್ಸವ ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆಯಿತು.

ಭಾನುವಾರ ಸಂಜೆ ಸಂಜೆ ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯಿಂದ ಭಜನೆ, ರಾತ್ರಿ 7.30ರಿಂದ ಕೀರ್ತಿಶೇಷ ಶ್ರೀ ಚಿದಾನಂದ ಕಾಮತ್ ಕಾಸರಗೋಡು ಅವರ ಶಿಷ್ಯವರ್ಗದ ಡಿಂಡಿಮ ಕಲಾವಿದರಿಂದ ಮತ್ತು ರಾಜ್ಯ ಪಶಸ್ತಿ ವಿಜೇತ ನೆಹರುನಗರ ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರ್ಯೂ ಬಳಗದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಬಳಿಕ ಭಂಡಾರ ಆಗಮಿಸಿ, ಕಲ್ಲುರ್ಟಿ, ಗುಳಿಗ ದೈವಗಳ ನೇಮ ನಡೆಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…