ಧಾರ್ಮಿಕ

ಮಹಾಕುಂಭಮೇಳ: 90 ಸಾವಿರ ಖೈದಿಗಳಿಗೆ ಸ್ನಾನ ಭಾಗ್ಯ! ಪವಿತ್ರ ಸ್ನಾನ ಮಾಡಿಸಿದ ಬಗೆಯಾದರೂ ಹೇಗೆ ಬಲ್ಲಿರಾ?

GL
ಜೈಲುಗಳಲ್ಲಿ ಬಂಧಿತರಾಗಿರುವ ಸುಮಾರು 90 ಸಾವಿರ ಕೈದಿಗಳಿಗೆ ಮಹಾಕುಂಭದ ಪವಿತ್ರ ಸ್ನಾನ ಮಾಡಲು ಅವಕಾಶ ನೀಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ: ಉತ್ತರ ಪ್ರದೇಶದ 75 ಜೈಲುಗಳಲ್ಲಿ ಬಂಧಿತರಾಗಿರುವ ಸುಮಾರು 90 ಸಾವಿರ ಕೈದಿಗಳಿಗೆ ಮಹಾಕುಂಭದ ಪವಿತ್ರ ಸ್ನಾನ ಮಾಡಲು ಅವಕಾಶ ನೀಡಲಾಯಿತು.

chennai-shopping
maithri

ಅಧಿಕಾರಿಗಳು ಲಕ್ನೋ, ಅಯೋಧ್ಯೆ ಮತ್ತು ಅಲಿಘರ್‌ನ ವಿವಿಧ ನಗರಗಳ ಜೈಲುಗಳಿಗೆ ತ್ರಿವೇಣಿ ಸಂಗಮದ ಕೆಲವು ಪವಿತ್ರ ನೀರನ್ನು ತಂದುಕೊಡುವ ಮೂಲಕ, ಕೈದಿಗಳಿಗೆ ಪವಿತ್ರಾ ಸ್ನಾನದ ಅವಕಾಶ ಕಲ್ಪಿಸಿಕೊಡಲಾಯಿತು.

ಅಧಿಕಾರಿಗಳ ಪ್ರಕಾರ, ಸಂಗಮ ತ್ರಿವೇಣಿ ನೀರನ್ನು ಸಾಮಾನ್ಯ ನೀರಿನೊಂದಿಗೆ ಬೆರೆಸಿ ಸಣ್ಣ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಲಾಗಿದೆ. ಕೈದಿಗಳಿಗೆ ಪವಿತ್ರ ಸ್ನಾನ ಮಾಡಲು ಮತ್ತು ಜೈಲಿನಲ್ಲಿಯೇ ಪ್ರಾರ್ಥನೆ ಸಲ್ಲಿಸಲು ಅನುವು ಮಾಡಿಕೊಡಲಾಯಿತು.

ಲಕ್ನೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುಪಿಯ ಜೈಲು ಸಚಿವ ದಾರಾ ಸಿಂಗ್ ಚೌಹಾಣ್‌, ಸುಮಾರು 90 ಸಾವಿರ ಕೈದಿಗಳಿಗೆ ಪವಿತ್ರ ಸ್ನಾನ ಮಾಡುವ ಅವಕಾಶವನ್ನು ನೀಡಲಾಗಿದೆ ಎಂದು ಹೇಳಿದರು.

ಸಾಮಾನ್ಯ ಜನರು ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಅವರ ನಂಬಿಕೆಯ ಹೊರತಾಗಿಯೂ ಜೈಲುವಾಸದಲ್ಲಿರುವವರು ನಾಲ್ಕು ಗೋಡೆಗಳಿಂದ ಹೊರಬರಲು ಸಾಧ್ಯವಿಲ್ಲ ಎಂಬ ದೃಷ್ಟಿಯಿಂದ ಕೈದಿಗಳ ಒತ್ತಾಯ ಮೇರೆಗೆ ಈ ಅವಕಾಶ ಕಲ್ಪಿಸಿಕೊಡಲಾಯಿತು.

ಜೈಲಿನ ಎಲ್ಲಾ ಹಿರಿಯ ಮತ್ತು ಕಿರಿಯ ಅಧಿಕಾರಿಗಳ ಬೆಂಬಲದೊಂದಿಗೆ, ಉತ್ತರ ಪ್ರದೇಶದ ಸುಮಾರು ತೊಂಬತ್ತು ಸಾವಿರ ಕೈದಿಗಳು ಪವಿತ್ರ ಸ್ನಾನ ಮಾಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…