ಧಾರ್ಮಿಕ

ಎಸ್‌ಪಿವೈಎಸ್‌ಎಸ್‌ ಯೋಗ ಸಮಿತಿಯಿಂದ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ | ಅಹೋರಾತ್ರಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮ

GL
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್‌ಪಿವೈಎಸ್‌ಎಸ್‌ ಯೋಗ ಸಮಿತಿಯ ಸಹಕಾರದಲ್ಲಿ ಶಿವರಾತ್ರಿಯ ಪ್ರಯುಕ್ತ ಸಾಮೂಹಿಕ ಏಕಾದಶ ಯೋಗ ಶಿವ ನಮಸ್ಕಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್‌ಪಿವೈಎಸ್‌ಎಸ್‌ ಯೋಗ ಸಮಿತಿಯ ಸಹಕಾರದಲ್ಲಿ ಶಿವರಾತ್ರಿಯ ಪ್ರಯುಕ್ತ ಸಾಮೂಹಿಕ ಏಕಾದಶ ಯೋಗ ಶಿವ ನಮಸ್ಕಾರ ನಡೆಯಿತು.

ಫೆ.26ರಂದು ರಾತ್ರಿ 9.30ರಿಂದ ಉದ್ಘಾಟನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮ ಫೆ. 27ರ ಮುಂಜಾನೆ 6ರ ತನಕ ಜಾಗರಣೆ, ಭಜನೆ, ಶಿವಜಾಗರಣೆ ಮಹತ್ವ, ಭಜನೆ ಮಹತ್ವ, ಶಿವ ಪಂಚಾಕ್ಷರಿ ಮಹತ್ವ, ಮುಂತಾದ ವಿಷಯಗಳಲ್ಲಿ ಬೌದ್ಧಿಕ್‌, ಕುಣಿತ ಭಜನೆ, ಶಿವ ಪಂಚಾಕ್ಷರಿ ಜಪ, ಶಿವಾಷ್ಟೋತ್ತರ ಶತನಾಮನಿ ಪಠಣ, ಮೃತ್ಯಂಜಯ ಜಪ ಪಠಣೆ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಶ್ರೀಕ್ಷೇತ್ರದಲ್ಲಿ 108 ಸುತ್ತು ಪ್ರದಕ್ಷಿಣೆ, ಕಲಶತೀರ್ಥ ಪ್ರೋಕ್ಷಣೆ ಕಾರ್ಯಕ್ರಮದ ಜತೆಗೆ ಸಾಮೂಹಿಕ ಏಕಾದಶ ಯೋಗ ಶಿವ ನಮಸ್ಕಾರವು 4 ಆವೃತ್ತಿಗಳಲ್ಲಿ ನಡೆಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಪೂರ್ಣೇಶ್ವರೀ ಹಾಲ್‌ನಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.

ಸಮಿತಿಯ ತಾಲೂಕು ಸಂಚಾಲಕರು ಉದ್ಘಾಟಿಸಿದರು.  ವೇದಿಕೆಯಲ್ಲಿ ಕಾರ್ಯಕ್ರಮದ ಮಾರ್ಗದರ್ಶಕರು, ಸಂಚಾಲಕರು ಹಾಗೂ ತಾಲೂಕಿನ ಪ್ರಮುಖರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕಿನ ವಿವಿಧ ಶಾಖೆಗಳಿಂದ ಸುಮಾರು 200ಕ್ಕೂ ಮಿಕ್ಕಿ ಯೋಗಬಂಧುಗಳು ಪಾಲ್ಗೊಂಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಆರ್ ಆರ್ ಸ್ಕ್ರ್ಯಾಪ್ ಮಾಲಕ ಎಸ್.ಎ. ಇಸ್ಮಾಯಿಲ್

ಮಾಣಿ: ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ವಾರ್ಷಿಕ ಮಹಾಸಭೆ ಮದ್ರಸಾ ಹಾಲ್ ನಲ್ಲಿ ನಡೆಯಿತು.…

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…