tamanvi
ವಿಶೇಷಸ್ಥಳೀಯ

ಅಮರ್ ಜವಾನ್ ಜ್ಯೋತಿ ಸ್ಮಾರಕದ ಗ್ಯಾಸ್ ಸಿಲಿಂಡರ್ ಪ್ರಾಯೋಜಕತ್ವಕ್ಕೆ ಅವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರ ಸ್ಮರಣಾರ್ಥ ಪುತ್ತೂರಿನಲ್ಲಿ ಸ್ಥಾಪಿಸಲಾಗಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ದಿನಪೂರ್ತಿ ಜ್ಯೋತಿ ಉರಿಯುವ ವ್ಯವಸ್ಥೆ ಕಲ್ಪಿಸಲಾಗಿದೆ.

ಜ್ಯೋತಿಯನ್ನು ನಿರಂತರವಾಗಿ ಉರಿಸಲು ಗ್ಯಾಸ್ ವ್ಯವಸ್ಥೆ ಮಾಡಲಾಗಿದ್ದು, ಇದರ ಗ್ಯಾಸ್ ಸಿಲಿಂಡರ್‌ಗಳನ್ನು ಪ್ರಾಯೋಜಿಸಲು ದೇಶಭಕ್ತ ನಾಗರಿಕರಿಗೆ ಅವಕಾಶ ನೀಡಲಾಗಿದೆ.

ಆಸಕ್ತರು ಒಂದು ಗ್ಯಾಸ್ ಸಿಲಿಂಡರ್‌ಗೆ ತಗಲುವ ಮೊತ್ತವನ್ನು ನಿಗದಿತ ಖಾತೆಗೆ ವರ್ಗಾಯಿಸಿ, ಪಾವತಿಯ ಮಾಹಿತಿಯನ್ನು ಪ್ರಕಟಣೆಯಲ್ಲಿ ನೀಡಿರುವ ಸಂಪರ್ಕ ಸಂಖ್ಯೆಗೆ ಕಳುಹಿಸುವಂತೆ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ತಿಳಿಸಿದೆ.

ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರಯೋಧರ ಸ್ಮರಣಾರ್ಥ ನಿರಂತರವಾಗಿ ಉರಿಯುವ ಅಮರ್ ಜವಾನ್ ಜ್ಯೋತಿಗೆ ತಮ್ಮಿಂದಾದ ಕೊಡುಗೆ ನೀಡುವ ಮೂಲಕ ದೇಶಭಕ್ತಿಯ ಗೌರವ ಸಲ್ಲಿಸುವಂತೆ ಸಮಿತಿ ಮನವಿ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 140