ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಆರ್ ಸಿಬಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಾಲ್ತುಳಿತ ದುರಂತ ಸಂಭವಿಸಿ 24 ಗಂಟೆ ಬಳಿಕ ಇದೀಗ ಪ್ರಕರಣ ದಾಖಲಾಗಿದೆ.
ಎ1 ಆರ್ ಸಿಬಿ ಮ್ಯಾನೇಜೈಂಟ್, ಎ2 ಡಿಎನ್ ಎ ಇವೆಂಟ್ ಮ್ಯಾನೇಜೈಂಟ್, ಎ3 ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಎಂದು ಪ್ರಕರಣ ದಾಖಲಾಗಿದೆ.
ಬಿಎನ್ ಎಸ್ ಸೆಕ್ಷನ್ 105, 115, 118 ಅಡಿ ಮೊಕದ್ದಮೆ ದಾಖಲಿಸಲಾಗಿದೆ.