ಕ್ರೀಡೆ

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಿಂದ ಶಿಫ್ಟ್!! ಹಿಂದಿನ ವರ್ಷದ ರಾದ್ಧಾಂತ ಶಿಫ್ಟಿಗೆ ಕಾರಣವಾಯ್ತೇ: ಹೇಳಿಕೆ ನೀಡಿದ ಡಿಕೆಶಿ!

GL

ಈ ಸುದ್ದಿಯನ್ನು ಶೇರ್ ಮಾಡಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL Season 2026) ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದಂತೆ, ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಶಿಫ್ಟ್ ಮಾಡಲಾಗಿದೆ.

chennai-shopping
maithri

ಅಂದ ಹಾಗೇ, ಹಾಲಿ ಚಾಂಪಿಯನ್ ತಂಡದ ತವರು ಮೈದಾನದಲ್ಲೇ ಫೈನಲ್ ಪಂದ್ಯಾಟವನ್ನು ಸಾಮಾನ್ಯವಾಗಿ ಆಯೋಜಿಸಲಾಗುತ್ತದೆ. ಆದ್ದರಿಂದ ಈ ಬಾರಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಬೇಕಿತ್ತು. ಹಿಂದಿನ ವರ್ಷ ಆರ್.ಸಿ.ಬಿ. ಫೈನಲ್ ಪಂದ್ಯದಲ್ಲಿ ಗೆದ್ದು ಕಪ್ ತನ್ನದಾಗಿಸಿಕೊಂಡಿತ್ತು. ಆ ಸಂದರ್ಭ ದೊಡ್ಡ ರಾದ್ಧಾಂತ ಆಗಿರುವುದನ್ನು ನೆನಪಿಸಿಕೊಳ್ಳಬಹುದು.

ಇದೀಗ ಆರ್.ಸಿ.ಬಿ. ಫೈನಲ್ ಪಂದ್ಯದ ಕಾದಾಟವನ್ನು ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್ ಮಾಡಲಾಗಿದೆ. ಈ ಮೂಲಕ ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಮಾತ್ರವಲ್ಲ, ಇದೇ ಕಾರಣಕ್ಕೆ ಫೈನಲ್ ಪಂದ್ಯಾಟವನ್ನು ಶಿಫ್ಟ್ ಮಾಡಲಾಗಿದೆಯೇ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಶಾಸಕರಿಗೆ ಐಪಿಎಲ್ ಟಿಕೆಟಿಗೂ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ. ಬೇರೆ ಕಡೆ ಶೇಕಡಾ 50ರಷ್ಟು ಸೀಟ್ ಕೊಡ್ತಾರೆ. ಅವರೇನೋ ಇನ್’ಫ್ಲೂಯೆನ್ಸ್ ಮಾಡಿ ಗುಜರಾತಿಗೆ ಸ್ಥಳಾಂತರಿಸಿದ್ದಾರೆ. ದೊಡ್ಡ ಸ್ಟೇಡಿಯಂನಲ್ಲಿ 1 ಲಕ್ಷ ಜನ ಸೇರಬಹುದು ಅಂತ ಮಾಡಿರಬಹುದು ಅಷ್ಟೇ. ಟಿಕೆಟಿಗೂ ಅದಕ್ಕೂ ಸಂಬಂಧ ಇಲ್ಲ. ಯಾರು ಹೇಳಿದ್ದು ಟಿಕೆಟ್ ವಿಚಾರವಾಗಿ ಶಿಫ್ಟ್ ಮಾಡ್ತಿದ್ದಾರೆ ಅಂತ? ಬಿಸಿಸಿಐ ಅವರು ಹೇಳಿಕೆ ಕೊಡಲಿ ಅವರಿಗೆ ಆಮೇಲೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…

ಪುತ್ತೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಗೆ 3 ಸರಕಾರಿ ಜಿಮ್ ಸೆಂಟರ್ | ಕ್ರೀಡಾ ಇಲಾಖೆಯ ಕಮಿಷನರ್ ಜೊತೆ ಶಾಸಕ ಅಶೋಕ್ ರೈ ಸಭೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್…