ಹನಿಟ್ರಾಪ್(Honey trape) ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ(Vidhana sabhe) ಕಲಾಪದಲ್ಲಿ ಶುಕ್ರವಾರ ಗದ್ದಲಕ್ಕೆ ಕಾರಣವಾಯಿತು.
ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾದ ವೇಳೆ ಬಿಜೆಪಿ(BJP) ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್(Speaker) ಮೇಲೆ ಎಸೆಯುತ್ತಾ, “ಹನಿಟ್ರ್ಯಾಪ್ ಸರ್ಕಾರ” ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ, ಪ್ರತಿಪಕ್ಷದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೋಪದಿಂದ ಕೂಗಾಡಿದ ಘಟನೆಯೂ ನಡೆಯಿತು.