ರಾಜ್ಯ ವಾರ್ತೆ

ಇದ್ದಕ್ಕಿದ್ದಂತೆ ತೆರೆದ ಕೆ.ಆ‌ರ್.ಎಸ್ ಡ್ಯಾಮ್: ಅಪಾರ ನೀರು ವ್ಯರ್ಥ!!

ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ಗೇಟ್ ಏಕಾಏಕಿ ಓಪನ್ ಆಗಿದೆ. ಅಪಾರ ಪ್ರಮಾಣದ ಕಾವೇರಿ ನೀರು ವ್ಯರ್ಥವಾಗಿ ಹರಿದು ಹೋಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ಗೇಟ್ ಏಕಾಏಕಿ ಓಪನ್ ಆಗಿದೆ. ಅಪಾರ ಪ್ರಮಾಣದ ಕಾವೇರಿ ನೀರು ವ್ಯರ್ಥವಾಗಿ ಹರಿದು ಹೋಗಿದೆ.

ಭಾನುವಾರ ರಾತ್ರಿ ಇದ್ದಕ್ಕಿದಂತೆ ಕೆ.ಆರ್.ಎಸ್ ಡ್ಯಾಂ +80 ಗೇಟ್ ಗಳು ತೆರೆದಿದ್ದು 24 ಗಂಟೆಗಳ ಕಾಲ ಬರೋಬ್ಬರಿ 2000 ಕ್ಯೂಸೆಕ್ ನೀರು ವ್ಯರ್ಥವಾಗಿದೆ.

ಭಾನುವಾರದಿಂದ ಸೋಮವಾರದವರೆಗೆ ಈ ಅವಾಂತರ ನಡೆದಿದ್ದರು ಅಧಿಕಾರಿಗಳಿಗೆ ತಡವಾಗಿ ಗಮನಕ್ಕೆ ಬಂದಿದೆ.

ಬಳಿಕ ಸೋನವಾರ ರಾತ್ರಿ ಕಾವೇರಿ ನಿಗಮದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ.

ಜಲಾಶಯದ ಗೆಟ್ ಏಕಾಏಕಿ ತೆರೆಯಲು ಕಾರಣವೇನು? ಅಧಿಕಾರಿಗಳ ನಿರ್ಲಕ್ಷ್ಯವೇ? ಕಾರಣವೇನೆಂಬುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಗೇಟ್ ನ ಮೋಟರ್ ರಿವರ್ಸ್ ಆಗಿ ಗೇಟ್ ತೆರೆದಿರಬಹುದೇ? ಅಥವಾ ಸಿಬ್ಬಂದಿಗಳೇ ಗೇಟ್ ತೆರೆದಿದ್ದಾರೆಯೇ ಎಂದು ಅಧಿಕಾರಿಗಳು ಕೂಡ ಸಂಶಯ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts