ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ಗೇಟ್ ಏಕಾಏಕಿ ಓಪನ್ ಆಗಿದೆ. ಅಪಾರ ಪ್ರಮಾಣದ ಕಾವೇರಿ ನೀರು ವ್ಯರ್ಥವಾಗಿ ಹರಿದು ಹೋಗಿದೆ.
ಭಾನುವಾರ ರಾತ್ರಿ ಇದ್ದಕ್ಕಿದಂತೆ ಕೆ.ಆರ್.ಎಸ್ ಡ್ಯಾಂ +80 ಗೇಟ್ ಗಳು ತೆರೆದಿದ್ದು 24 ಗಂಟೆಗಳ ಕಾಲ ಬರೋಬ್ಬರಿ 2000 ಕ್ಯೂಸೆಕ್ ನೀರು ವ್ಯರ್ಥವಾಗಿದೆ.
ಭಾನುವಾರದಿಂದ ಸೋಮವಾರದವರೆಗೆ ಈ ಅವಾಂತರ ನಡೆದಿದ್ದರು ಅಧಿಕಾರಿಗಳಿಗೆ ತಡವಾಗಿ ಗಮನಕ್ಕೆ ಬಂದಿದೆ.
ಬಳಿಕ ಸೋನವಾರ ರಾತ್ರಿ ಕಾವೇರಿ ನಿಗಮದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ.
ಜಲಾಶಯದ ಗೆಟ್ ಏಕಾಏಕಿ ತೆರೆಯಲು ಕಾರಣವೇನು? ಅಧಿಕಾರಿಗಳ ನಿರ್ಲಕ್ಷ್ಯವೇ? ಕಾರಣವೇನೆಂಬುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಗೇಟ್ ನ ಮೋಟರ್ ರಿವರ್ಸ್ ಆಗಿ ಗೇಟ್ ತೆರೆದಿರಬಹುದೇ? ಅಥವಾ ಸಿಬ್ಬಂದಿಗಳೇ ಗೇಟ್ ತೆರೆದಿದ್ದಾರೆಯೇ ಎಂದು ಅಧಿಕಾರಿಗಳು ಕೂಡ ಸಂಶಯ ವ್ಯಕ್ತಪಡಿಸಿದ್ದಾರೆ.





















