- Home
- ರಾಜ್ಯ ವಾರ್ತೆ
- ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ!
ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ!
0
2,876
ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ.
ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ.
ಏ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು.
ಇಂದು (ಏ.14ರ ಸೋಮವಾರ) ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್ ಜನಾರ್ಧನ್ ಅವರ ಮನೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲದಗಳು ತಿಳಿಸಿದೆ.
1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್..’, ‘ತರ್ಲೆ ನನ್ಮಗ’, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ 500ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದರು.
2016ರ ನಂತರ ಅವರು ಚಿತ್ರರಂಗದಲ್ಲಿ ಸಕ್ರೀಯರಾಗಿರಲ್ಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.
ಹಿರಿತೆರೆ ಜೊತೆ ಕಿರುತೆರೆಯಲ್ಲಿಯೂ ಬ್ಯಾಂಕ್ ಜನಾರ್ಧನ್ ಕೆಲಸ ಮಾಡಿದ್ದಾರೆ. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ಬ್ಯಾಂಕ್ ಜನಾರ್ಧನ್ ನಟಿಸಿದ್ದರು.
Related Posts
ಬೆಂಗಳೂರು ಕಂಬಳದ ಬಳಿಕ ಇನ್ನು ಮೈಸೂರು ಕಂಬಳ? ಶಾಸಕ ಅಶೋಕ್ ರೈಗೆ ಕರೆ ಮಾಡಿದ ಟ್ರಬಲ್ ಶೂಟರ್!
ರೈಗಳೆ… ನೀವು ದಸರಾಗೆ ಮೈಸೂರಲ್ಲಿಕಂಬಳ ಮಾಡ್ತೀರಾ? ಬೆಂಗಳೂರಲ್ಲಿಮಾಡಿದ ಹಾಗೆ ನಮ್ಮ…
“ದಾಖಲೆ ಇಲ್ಲದಿದ್ದರೂ ಭಯ ಬೇಡ” | 4500 ಜಮೀನಿನ ಗಿಫ್ಟ್ ಬಗ್ಗೆ ಗ್ರಾಮಸ್ಥರಿಗೆ ಒಡೆಯರ್ ಅಭಯ!
ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು…
ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಗ್ರಾಹಕರಿಗೆ ಬರೆ! ರೈಡ್ ಶೇರಿಂಗ್, ಫುಡ್ ಡೆಲಿವರಿ ಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಮಸೂದೆ ಮಂಡಿಸಿದ ರಾಜ್ಯ ಸರ್ಕಾರ!
ಕರ್ನಾಟಕ ಸರ್ಕಾರವು ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಮಹತ್ವದ ಕ್ರಮ ಕೈಗೊಂಡಿದ್ದು.…
ಮೇ 1ರಿಂದ ಪೌರ ಕಾರ್ಮಿಕರ ಸೇವೆ ಖಾಯಂ ; ಸಿ ಎಂ
ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಮೇ 1ರ…
ಇಂದಿನಿಂದ 900 ಔಷಧಿಗಳ ಬೆಲೆ ಏರಿಕೆ!!
ಔಷಧಿಗಳ ಬೆಲೆಗಳನ್ನು ನಿಯಂತ್ರಿಸುವ ಔಷಧಗಳ ಆದೇಶ, 2013 (DPCO) ಅಡಿಯಲ್ಲಿ ವಾರ್ಷಿಕ…
ಎಲ್ಪಿಜಿ ಸಿಲಿಂಡರ್ ದರ ರೂ. 50 ಏರಿಕೆ!!
ಕೇಂದ್ರ ಸರಕಾರ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿದೆ. 14.2 ಕಿಲೋ ಎಲ್ಪಿಜಿ…
ಹೊಟ್ಟೆಪಾಡಿನ ಭಿಕ್ಷಾಟನೆ ಇಂದು ಹೈಟೆಕ್ ವೃತ್ತಿ: ಸದನದ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು|ಭಿಕ್ಷಾಟನೆ ನಿರ್ಮೂಲನೆ, ಪುನರ್ವಸತಿ ಕೇಂದ್ರಕ್ಕೆ ಆಗ್ರಹಿಸಿದ ವಿಧಾನ ಪರಿಷತ್ ಶಾಸಕ
ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಎಂ.ಎಲ್.ಸಿ ಕಿಶೋರ್ ಕುಮಾರ್…
ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ ತಿಳಿಸಿದ ಸಿದ್ದರಾಮಯ್ಯ
ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್ ದೀಪಾಲಂಕಾರದ…
ರಸ್ತೆ ಕಾಮಗಾರಿ ಶಿರಾಡಿ ಘಾಟಿ ಬಂದ್?
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ…
ಮಹಿಳೆಯರಿಗೆ ಬಾರ್ಗಳಲ್ಲಿ ಕೆಲಸ ಮಾಡಲು ಅವಕಾಶ..!!
ಮಹಿಳೆಯರಿಗೆ ಬಾರ್ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಅಂಗೀಕರಿಸಿತು.