Gl
ರಾಜ್ಯ ವಾರ್ತೆ

ಏ. 27ರಂದು ನಡೆಯುವ ವಾಸ್ತು ಬಗ್ಗೆ ಚಿಂತನ – ಮಂಥನ 2025ರ ಪೂರ್ವಭಾವಿ ಸಭೆ | ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ: ವಿಶ್ವಕರ್ಮ ಸಂಘ-ಸಂಸ್ಥೆಗಳ ಖಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ಇದರ ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಏಪ್ರಿಲ್ 27ರಂದು ನಡೆಯಲಿರುವ ವಾಸ್ತು ಬಗ್ಗೆ ಚಿಂತನ – ಮಂಥನ 2025ರ ಪೂರ್ವಭಾವಿ ಸಭೆ ಏ. 22ರಂದು ಬೊಳುವಾರಿನಲ್ಲಿ ನಡೆಯಿತು.

Pashupathi

ಮಹಾಮಂಡಲದ ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ ಅವರು ವಾಸ್ತು ಬಗ್ಗೆ ಚಿಂತನ – ಮಂಥನ ಕಾರ್ಯಕ್ರಮದ ಮಾಹಿತಿ ನೀಡಿ, ಬೆಳಿಗ್ಗೆ 10 ಗಂಟೆಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸಂಪನ್ಮೂಲ ವ್ಯಕ್ತಿಯಾಗಿರುವ ವಾಸ್ತು ತಜ್ಞ ಎನ್. ಹರಿಶ್ಚಂದ್ರ ಆಚಾರ್ಯ ನೆಟ್ಟಣಿಗೆ ಅವರು ವಾಸ್ತುವಿನ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಪ್ರಧಾನ ಕಾರ್ಯದರ್ಶಿ ವೇ.ಮೂ. ಐ. ಲೋಲಾಕ್ಷ ಶರ್ಮ ಉಪಸ್ಥಿತರಿರುವರು. ಸಮಾಜಬಾಂಧವರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು.

akshaya college

ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ್ ಆಚಾರ್ಯ ಕೆ., ವಿಶ್ವಕರ್ಮ ಯುವ ಸಮಾಜ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೆ., ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಸುರೇಂದ್ರ ಆಚಾರ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ನಿರಂಜನ ಆಚಾರ್ಯ ಮರೀಲು ಸ್ವಾಗತಿಸಿದರು. ಜಯಪ್ರಕಾಶ್ ಕುಡ್ಚಿಲ ವಂದಿಸಿದರು.

ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ: ವಿಶ್ವಕರ್ಮ ಸಂಘ-ಸಂಸ್ಥೆಗಳ ಖಂಡನೆ

ಶಿವಮೊಗ್ಗ ಹಾಗೂ ಬೀದರ್’ನಲ್ಲಿ ಪರೀಕ್ಷಾ ಸಂದರ್ಭ ಪರೀಕ್ಷಾರ್ಥಿಯೋರ್ವರ ಜನಿವಾರ ತೆಗೆಸಿದ ಪ್ರಕರಣದ ಬಗ್ಗೆ ಪುತ್ತೂರು ತಾಲೂಕು ವಿಶ್ವಕರ್ಮ ಸಂಘ – ಸಂಸ್ಥೆಗಳು ಖಂಡನೆ ವ್ಯಕ್ತಪಡಿಸಿವೆ.

ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ್ ಆಚಾರ್ಯ ಕೆ. ಮಾತನಾಡಿ, ಶಿವಮೊಗ್ಗ ಹಾಗೂ ಬೀದರ್’ನಲ್ಲಿ ಪರೀಕ್ಷಾ ಸಂಧರ್ಭ ಪರೀಕ್ಷಾರ್ಥಿಯ ಜನಿವಾರವನ್ನು ತೆಗೆಸಿದ ಪ್ರಕರಣ ಖಂಡನೀಯ. ಸನಾತನ ಹಿಂದೂ ಪರಂಪರೆಯಲ್ಲಿ ಇಂತಹ ಘಟನೆ ನಡೆದಿರುವುದು ನಿಜಕ್ಕೂ ಖೇದಕರ ಎಂದರು.

ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣದ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

ವಿಶ್ವಕರ್ಮ ಯುವ ಸಮಾಜ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೆ., ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಸುರೇಂದ್ರ ಆಚಾರ್ಯ, ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ಆಚಾರ್ಯ, ತಾಲೂಕಿನ ವಿವಿಧ ವಿಶ್ವಕರ್ಮ ಸಂಘದ ಪದಾಧಿಕಾರಿಗಳು, ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ವೀಡಿಯೋ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ! ಸುಳ್ಳಿನ ಮೇಲೆ ಸುಳ್ಳು ಹೇಳಿದ್ಯಾಕೆ ಬಾಲಕೃಷ್ಣ!

ಚೈತ್ರಾ ಬಿಗ್ ಬಾಸ್ಗೆ ಹೋದ ಸಂದರ್ಭದಲ್ಲಿ ಬಾಲಕೃಷ್ಣ ಅವರು ವಿಶ್ ಮಾಡಿದ್ದ ವಿಡಿಯೋ ಒಂದು ಈಗ…