ರಾಜ್ಯ ವಾರ್ತೆ

ರಾಯರ ಮಠದೊಳಗೆ ಚಪ್ಪಲಿ ಎಸೆದ ಅಪರಿಚಿತೆ: ಆಕ್ರೋಶ!!

ಬೆಂಗಳೂರು: ರಾಯರ ಮಠದೊಳಗೆ ಅಪರಿಚಿತೆಯೋರ್ವರು ಚಪ್ಪಲಿ ಎಸೆದು ಪರಾರಿಯಾದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಯರ ಮಠದೊಳಗೆ ಅಪರಿಚಿತೆಯೋರ್ವರು ಚಪ್ಪಲಿ ಎಸೆದು ಪರಾರಿಯಾದ ಘಟನೆ ನಡೆದಿದೆ.

Shani-pooja

ಭಾನುವಾರ ಬೆಂಗಳೂರಿನ ಇಂದಿರಾನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಘಟನೆ ಜರುಗಿದೆ.

ಬೆಳಗಿನ ಜಾವ ಮಠಕ್ಕೆ ಬಂದಿರುವ ಅಪರಿಚಿತ ಮಹಿಳೆಯೊಬ್ಬಳು ಮಠದ ಕಿಟಕಿಯಿಂದ ಚಪ್ಪಲಿ ಎಸೆದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾಳೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಕೃತ್ಯವನ್ನು ಭಕ್ತರು ಮತ್ತು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಯರ ಮಹಾತ್ಮೆಗೆ ಅವಮಾನ ಮಾಡಲು ಈ ಕೃತ್ಯ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಹಿಂದಿನ ಉದ್ದೇಶ ಏನೆಂಬುದು ತಿಳಿದಿಲ್ಲ. ಮಹಿಳೆ ಚಪ್ಪಲಿ ಎಸೆದಿರುವುದು ಸಿಟ್ಟೋ, ಅಥವಾ ಬೇರೆ ಯಾವುದೋ ಉದ್ದೇಶವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಈ ಘಟನೆಯಿಂದ ಭಕ್ತರ ಮನಸ್ಸಿಗೆ ಧಕ್ಕೆಯುಂಟಾಗಿದ್ದು, ರಾಯರ ಮಹಾತ್ಮೆಯ ಬಗ್ಗೆ ಚರಿತ್ರೆಗಳು ಮತ್ತು ಭಕ್ತರ ಅನುಭವಗಳು ಇಂದಿಗೂ ಸ್ಫೂರ್ತಿಯಾಗಿರುವಾಗ ಇಂತಹ ಕೃತ್ಯವು ಸಮಾಜದಲ್ಲಿ ಆತಂಕ ಉಂಟುಮಾಡಿದೆ. ಸ್ಥಳೀಯರು ಈ ಘಟನೆಯನ್ನು ಖಂಡಿಸಿ, ಮಠದ ಪಾವಿತ್ರ್ಯತೆಯನ್ನು ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…