ರಾಜ್ಯ ಸರಕಾರ ಸರಕಾರಿ ಶಾಲಾ ಮಕ್ಕಳ ಭವಿಷ್ಯಕ್ಕೆಂದು ಮಹತ್ವದ ಘೋಷಣೆಯನ್ನು ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸರಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸುವ ಕಾರಣದಿಂದ ಸರಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದು ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆಯನ್ನು ಸರಕಾರ ನೀಡಲಿದೆ ಎಂದು ಹೇಳಿದ್ದಾರೆ. ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವನ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರಕಾರ ಈ ಕ್ರಮ ಮಹತ್ವ ಪಡೆದಿದೆ.