tamanvi
ರಾಜ್ಯ ವಾರ್ತೆ

ಹೆಣ್ಣು ಮಗುವಿನ ಮೇಲೆ ಬಿಸಿ ನೀರು ಸುರಿದ ಸಿಬ್ಬಂದಿ! | ಕಾಫಿನಾಡಿನಲ್ಲೊಂದು ಅಮಾನವೀಯ ಘಟನೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ ಸಿಬ್ಬಂದಿಯೋರ್ವರು ಬಿಸಿ ನೀರು ಸುರಿದ ಅಮಾನವೀಯ ಘಟನೆ ವರದಿಯಾಗಿದೆ.

maithri

ಕಾಫಿನಾಡು ಎಂದೇ ಖ್ಯಾತವಾದ ಚಿಕ್ಕಮಗಳೂರು ನಗರದ ಗಾಂಧಿನಗರದ ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಈ ಘಟನೆ ನಡೆದಿದೆ.

ಶಿಶು ಆರೈಕಾ ಸಿಬ್ಬಂದಿ ಎಡವಟ್ಟಿನಿಂದಾಗಿ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಸ್ಥೆಯಲ್ಲಿ ಅನಾಥ ಮಕ್ಕಳನ್ನು ರಕ್ಷಣೆ ಮಾಡಿ ಆರೈಕೆ ಮಾಡಲಾಗುತ್ತದೆ. ಇಲ್ಲಿ ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ಹೆಣ್ಣು ಮಗುವಿನ ಸೊಂಟದ ಕೆಳ ಭಾಗ ಸಂಪೂರ್ಣ ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಈ ಹೆಣ್ಣು ಮಗುವನ್ನು ದತ್ತು ನೀಡಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ಘಟನೆ ನಡೆದಿದೆ.

ಘಟನೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದು ಇರಲಿ, ಅವರ ಗಮನಕ್ಕೆ ಬಾರದಂತೆ ಮುಚ್ಚಿಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಸದ್ಯ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ:  ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…