ರಾಜ್ಯ ವಾರ್ತೆ

ಬೆಳಗಾವಿ ಜಿಲ್ಲಾಧಿಕಾರಿಯ ಕಾರು ಜಪ್ತಿ!! ಗುತ್ತಿಗೆದಾರನಿಗೆ ಬಿಲ್ ಪಾವತಿ ಮಾಡದ್ದಕ್ಕೆ ಆದೇಶ ಹೊರಡಿಸಿದ ನ್ಯಾಯಾಲಯ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ: ಅನಿರೀಕ್ಷಿತ ಘಟನೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಅವರ ಕಾರನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ.

maithri

ಬ್ಯಾರೇಜ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಬಾಕಿ ಬಿಲ್ ಪಾವತಿ ಮಾಡದೇ ಇರುವುದಕ್ಕೆ ದಂಡ ಸಹಿತ 1.31 ಕೋಟಿ ರೂ. ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪಾವತಿಸದ ಹಿನ್ನೆಲೆಯಲ್ಲಿ ವಾರಂಟ್ ಸಹ ಜಾರಿಯಾಗಿತ್ತು ಎಂದು ಗುತ್ತಿಗೆದಾರರ ಪರ ವಕೀಲ ಓ.ಬಿ. ಜೋಶಿ ತಿಳಿಸಿದ್ದಾರೆ.

ಸಣ್ಣ ನೀರಾವರಿ ಇಲಾಖೆಗೆ ಸೇರಿದ ದೂಧಗಂಗಾ ನದಿಯ ಬ್ಯಾರೇಜ್ ನಿರ್ಮಾಣದ ಗುತ್ತಿಗೆಯನ್ನು ನಾರಾಯಣ ಕಾಮತ್ ಅವರಿಗೆ 1992-93ರಲ್ಲಿ ನೀಡಲಾಗಿತ್ತು. ಕಾಮಗಾರಿಗೆ ಬೇಕಿರುವ ಅನುದಾನ, ಸಿಮೆಂಟ್ ಅನ್ನು ಇಲಾಖೆ ನೀಡುವುದಾಗಿ ತಿಳಿಸಿತ್ತು. ಆದರೆ, ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾದರೂ ಅನುದಾನ ಕೊಡಲಿಲ್ಲ. ಇದರಿಂದಾಗಿ ನಾರಾಯಣ 1995ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಗುತ್ತಿಗೆದಾರನಿಗೆ ₹35 ಲಕ್ಷ ಪಾವತಿಸುವಂತೆ ಆದೇಶ ನೀಡಿತ್ತು. ಸರ್ಕಾರ ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ಆಗ ವಿಚಾರಣೆ ಮಾಡಿದ ಹೈಕೋರ್ಟ್, ಮರುವಿಚಾರಣೆ ಮಾಡುವಂತೆ ಆದೇಶಿಸಿತ್ತು. ಆಗ ಮರುವಿಚಾರಣೆ ಮಾಡಿದ ಕೆಳ ನ್ಯಾಯಾಲಯ, 2025ರ ಜೂನ್ ತಿಂಗಳೊಳಗೆ ಒಟ್ಟು ಬಾಕಿ ಮೊತ್ತದಲ್ಲಿ ಶೇ. 50ರಷ್ಟು (ಬಡ್ಡಿ ಸಹಿತವಾಗಿ) ಗುತ್ತಿಗೆದಾರನಿಗೆ ಪಾವತಿಸುವಂತೆ ತೀರ್ಪು ಕೊಟ್ಟಿತ್ತು ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್‌ ನಾಯಕ್ ಇಂದಾಜೆ ನೇಮಕ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್‌ ಪಾಸ್‌ ವಿತರಣೆ ಮಾಡಲು ಸರಕಾರ ರಚಿಸಿರುವ…

ದೇವಳ ಪಕ್ಕದಲ್ಲಿ ಸರಕಾರಿ ಶಾಲೆ: ಬಿಸಿಯೂಟದ ಮೊಟ್ಟೆಗೆ ಕುತ್ತು! ವಿದ್ಯಾರ್ಥಿಗಳಿಂದ ಶಾಲೆ ತೊರೆಯುವ ಸಾಮೂಹಿಕ ಬೆದರಿಕೆ!!

ಮಧ್ಯಾಹ್ನದ ಬಿಸಿ ಊಟದ ಯೋಜನೆ ಹಿನ್ನೆಲೆಯಲ್ಲಿ ದೇವಾಲಯದ ಪಕ್ಕದಲ್ಲಿರುವ ಸರ್ಕಾರಿ ಶಾಲೆಯೊಂದರ…