ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ. ಈ ರಜೆಗಳ ಸಂದರ್ಭ ಬೆಂಗಳೂರು ಮತ್ತು ಮಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತದೆ. ಹೀಗಾಗಿ, ಸಾರ್ವಜನಿಕರ ಬೇಡಿಕೆ ಮೇರೆಗೆ ಬೆಂಗಳೂರು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ.
ಈ ಬಗ್ಗೆ ನೈಋತ್ಯ ರೈಲ್ವೆಯು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿದೆ. ಯಾವ್ಯಾವ ಜಿಲ್ಲೆಗಳಿಗೆ ವಿಶೇಷ ರೈಲು ಓಡಿಸಲಾಗುತ್ತದೆ? ಮಾಹಿತಿ ಇಲ್ಲಿದೆ.
ಬೆಂಗಳೂರು-ಮಡಗಾಂವ್ ಎಕ್ಸ್ಪ್ರೆಸ್
• ರೈಲು ಸಂಖ್ಯೆ 06569: ಎಸ್ಎಮ್ವಿಟಿ ಬೆಂಗಳೂರು-ಮಡಗಾಂವ್ ರೈಲು ಆಗಸ್ಟ್ 26 ರಂದು ಎಸ್ಎಮ್ವಿಟಿ ಬೆಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ನಸುಕಿನ ಜಾವ 5:30ಕ್ಕೆ ಮಡಗಾಂವ್ ತಲುಪಲಿದೆ.
• ಇದೇ ರೈಲು ವಾಪಸ್ 06570: ಆಗಸ್ಟ್ 27 ರಂದು ಬೆಳಿಗ್ಗೆ 6:30ಕ್ಕೆ ಮಡಗಾಂವ್ನಿಂದ ಹೊರಟು ಅದೇ ದಿನ ರಾತ್ರಿ 11:40 ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ.
ರೈಲು ನಿಲುಗಡೆ
ಈ ರೈಲು ಚಿಕ್ಕಬಾನಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಬೆಂಗಳೂರು-ಬೀದರ್
• ರೈಲು ಸಂಖ್ಯೆ 06549: ಎಸ್ಎಮ್ವಿಟಿ ಬೆಂಗಳೂರು-ಬೀದರ್ ರೈಲು ಆಗಸ್ಟ್ 26 ರಂದು ರಾತ್ರಿ 9:15ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ತಲುಪಲಿದೆ.
• ಇದೇ ರೈಲು ವಾಪಸ್ 06550: ಬೀದರ್ನಿಂದ ಆಗಸ್ಟ್ 27 ರಂದು ಮಧ್ಯಾಹ್ನ 2:30ಕ್ಕೆ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ.
ರೈಲು ನಿಲುಗಡೆ
ಯಲಹಂಕ, ಹಿಂದುಪುರ, ಧರ್ಮಾವರಮ್, ಅನಂತಪುರ, ಗುಂಟಕಲ್, ಅದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಬೆಂಗಳೂರು-ಹುಬ್ಬಳ್ಳಿ
• ರೈಲು ಸಂಖ್ಯೆ 07341: ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ರೈಲು ಆಗಸ್ಟ್ 25 ರಂದು ಮಧ್ಯಾಹ್ನ 3:30 ಕ್ಕೆ ಯಶವಂತಪುರದಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಹುಬ್ಬಳ್ಳಿ ತಲುಪಲಿದೆ.
• ರೈಲು ಸಂಖ್ಯೆ 07342: ಯಶವಂತಪುರ- ಎಸ್ಎಸ್ಎಸ್ ಹುಬ್ಬಳ್ಳಿ ರೈಲು ಆಗಸ್ಟ್ 28 ರಂದು ಯಶವಂತಪುರದಿಂದ ಮಧ್ಯರಾತ್ರಿ 12:15 ಕ್ಕೆ ಹೊರಟು ಬೆಳಿಗ್ಗೆ 09:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.
ರೈಲು ನಿಲುಗಡೆ
ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ಎರಡೂ ದಿಕ್ಕುಗಳಲ್ಲಿ ನಿಲ್ಲುತ್ತದೆ. ಬೆಂಗಳೂರು-ಮಂಗಳೂರು
ಬೆಂಗಳೂರು-ಮಂಗಳೂರು
• ರೈಲು ಸಂಖ್ಯೆ 06251: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಯಶವಂತಪುರದಿಂದ ಆಗಸ್ಟ್ 25 ರಂದು ರಾತ್ರಿ 11:55ಕ್ಕೆ ಮರುದಿನ ಬೆಳಗ್ಗೆ 11:45 ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪುತ್ತದೆ.
• ರೈಲು ಸಂಖ್ಯೆ 06252: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 26 ರಂದು ಮಧ್ಯಾಹ್ನ 1ಗಂಟೆಗೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಯಶವಂತಪುರ ತಲುಪುತ್ತದೆ.
• ರೈಲು ಸಂಖ್ಯೆ 06253: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಆಗಸ್ಟ್ 26 ರಂದು ಯಶವಂತಪುರದಿಂದ ರಾತ್ರಿ 11:55 ಕ್ಕೆ ಹೊರಟು ಮರುದಿನ ಬೆಳಗ್ಗೆ 11:45 ಮಂಗಳೂರು ಸೆಂಟ್ರಲ್ ತಲುಪುತ್ತದೆ.
• ರೈಲು ಸಂಖ್ಯೆ 06254: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 27 ರಂದು ಮಧ್ಯಾಹ್ನ 2:15 ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 11:50 ಕ್ಕೆ ಯಶವಂತಪುರ ತಲುಪಲಿದೆ.
ರೈಲು ನಿಲುಗಡೆ
ಈ ರೈಲುಗಳು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟವಾಳದಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆಗಳಿವೆ.
ರೈಲು ಸಂಚಾರ ದಿನಾಂಕ ವಿಸ್ತರಣೆ
• ಈ ಹಿಂದೆ ಆಗಸ್ಟ್ 31 ರವರೆಗೆ ಸಂಚರಿಸುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 06539 SMVT ಬೆಂಗಳೂರು-ಬೀದರ್ ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು, ಸೆಪ್ಟೆಂಬರ್ 05 ರಿಂದ 28 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಸೆಪ್ಟೆಂಬರ್ 01 ರವರೆಗೆ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 06540 ಬೀದರ್-SMVT ಬೆಂಗಳೂರು ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ಸೆಪ್ಟೆಂಬರ್ 06 ರಿಂದ 29 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಆಗಸ್ಟ್ 25 ರವರೆಗೆ ಮಾತ್ರ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 07315 SSS ಹುಬ್ಬಳ್ಳಿ-ಮುಜಫರ್ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 01 ರಿಂದ 22 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಆಗಸ್ಟ್ 28 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07316 ಮುಜಫರ್ಪುರ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 04 ರಿಂದ 12 ರವರೆಗೆ ಓಡಲಿದೆ.
• ಈ ಹಿಂದೆ ಆಗಸ್ಟ್ 25 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07311 ವಾಸ್ಕೋ ಡ ಗಾಮಾ-ಮುಜಫರ್ ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 8 ರಿಂದ 22 ರವರೆಗೆ ಓಡಲಿದೆ.
- Home
- ರಾಜ್ಯ ವಾರ್ತೆ
- ಹಬ್ಬಗಳ ಸಾಲು: ಬೆಂಗಳೂರು, ಮಂಗಳೂರಿನಿಂದ ವಿಶೇಷ ರೈಲು – ವಿವರ ಹೀಗಿದೆ
ಹಬ್ಬಗಳ ಸಾಲು: ಬೆಂಗಳೂರು, ಮಂಗಳೂರಿನಿಂದ ವಿಶೇಷ ರೈಲು – ವಿವರ ಹೀಗಿದೆ
What's your reaction?
- 3094c
- 2994cc
- 29ai technology
- 28ajjavara
- 28alwas
- 27apology
- 27artificial intelegence
- 27avg
- 26bihar minister
- 26bjp
- 25bjp leader
- 25bjp national president
- 24bt ranjan
- 24co-operative
- 23coastal
- 23crime
- 23crime news
- 22cyclothon
- 22darmasthala
- 21death news
- 21dust bin
- 20education
- 20fraud
- 19gl
- 19gods own country
- 18gold
- 18google for education
- 18independence
- 17jewel
- 17jewellers
- 16jnana vikasa
- 16karnataka state
- 15kerala village
- 15kukke - kollur temple
- 14lokayuktha
- 14lokayuktha raid
- 14manipal
- 13minister krishna bairegowda
- 13mla ashok rai
- 12mohan alwa
- 12mudubidre
- 11nidana news
- 11nirvathu mukku
- 10nitin nabin
- 10police
- 9ptr tahasildar
- 9puttur
- 9puttur news
- 8puttur tahasildar
- 8republic
- 7revenue
- 7revenue department
- 6revenue minister
- 6school
- 5senior citizen
- 5silver
- 5society
- 4sowmya
- 4students
- 3tahasildar
- 3tahasildar absconded
- 2teachers
- 2tour
- 1trending
- 1udupi
- 0wastage
Related Posts
ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರಿಸದ 8 ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ
ಬೆಂಗಳೂರು: ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರಿಸದ ಹಿನ್ನೆಲೆ 8 ಐಎಎಸ್ ಅಧಿಕಾರಿಗಳಿಗೆ…
ಪಾಸ್ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಬೆಂಗಳೂರು ಪೊಲೀಸರ ಹೊಸ ಮಾರ್ಗಸೂಚಿ
ಬೆಂಗಳೂರು: ಪಾಸ್ಪೋರ್ಟ್ ಪೊಲೀಸ್ ಪರಿಶೀಲನೆ ವೇಳೆ ಸಾರ್ವಜನಿಕರಿಗೆ ಕಿರುಕುಳ ಹಾಗೂ ಲಂಚ ಬೇಡಿಕೆ…
ಎಲ್.ಪಿ.ಜಿ. ಗ್ಯಾಸ್ ದರ ಏರಿಕೆ: ಕಾಂಗ್ರೆಸ್ ಪ್ರತಿಭಟನೆ!
ಬೆಂಗಳೂರು: ಎಲ್.ಪಿ.ಜಿ. ಗ್ಯಾಸ್ ಸಿಲಿಂಡರ್ ದರವನ್ನು 60 ರೂ ಏರಿಕೆ ಹಿನ್ನೆಲೆಯಲ್ಲಿ ಯುವ…
ಪಠ್ಯಪುಸ್ತಕದಲ್ಲಿ ಪಾಠವಾಗಿ ಬರಲಿದ್ದಾರೆ ಪುನೀತ್ ರಾಜ್ ಕುಮಾರ್!
ನಟ ಪುನೀತ್ ರಾಜ್ಕುಮಾರ್ ಅವರ ಸಾಧನೆ ಎಲ್ಲರಿಗೂ ಸ್ಫೂರ್ತಿ. ಬಾಲನಟನಾಗಿ ಚಿತ್ರರಂಗದಲ್ಲಿ…
ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ: ಹೆಚ್ಚುವರಿ ಅಕ್ಕಿಗೆ ಬದಲಾಗಿ ‘ಇಂದಿರಾ ಆಹಾರ ಕಿಟ್’ ವಿತರಣೆ ‘ಕಿಟ್’ನಲ್ಲಿ ಏನೇನಿದೆ? ಇಲ್ಲಿದೆ ವಿವರ…
ಬೆಂಗಳೂರು :ರಾಜ್ಯದ ಬಡ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಅನ್ನ ಭಾಗ್ಯ…
ಮಧ್ಯಪ್ರಾಚ್ಯ ಬಿಕ್ಕಟ್ಟು: ರಾಜ್ಯದ ಕೃಷಿ ಮತ್ತು ಕುಕ್ಕುಟೋದ್ಯಮಕ್ಕೆ ಭಾರೀ ಪೆಟ್ಟು
ಇರಾನ್–ಇಸ್ರೇಲ್–ಅಮೆರಿಕ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯ ದೇಶಗಳಿಗೆ ಸಾಗಾಟ…
ಪ್ರಭಾತ್ ಕಲಾವಿದರು ಖ್ಯಾತಿಯ ಟಿ.ವಿ.ದ್ವಾರಕಾನಾಥ್ಗೆ ಶತನಮನ: ಪುತ್ಥಳಿ ಅನಾವರಣ
ಖ್ಯಾತ ಕಲಾವಿದರಾಗಿದ್ದ ದೂರದೃಷ್ಟಿಯ ನೇತಾರ ಟಿ.ವಿ.ದ್ವಾರಕಾನಾಥ್ ಅವರ ಜನ್ಮಶತಮಾನೋತ್ಸವವನ್ನು…
ಮಹಾಶಿವರಾತ್ರಿ ಹಬ್ಬ: ಬೆಂಗಳೂರಿಗೆ ವಿಶೇಷ ರೈಲು!
ಉಡುಪಿ: ಮಹಾಶಿವರಾತ್ರಿ ಹಬ್ಬದ ಸಂದರ್ಭ ಜನರ ವಿಶೇಷ ಬೇಡಿಕೆಯಂತೆ ಯಶವಂತಪುರ- ಮಡಗಾಂವ್ ಜಂಕ್ಷನ್-…
ಫೋಕ್ಸೋ ಪ್ರಕರಣ: ಬಿ.ಎಸ್.ವೈಗೆ ಹಿನ್ನಡೆ!
ಬೆಂಗಳೂರು: ಪೋಕೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ…
ದೀಪಾವಳಿ ಹಬ್ಬಕ್ಕೆ KSRTC 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ!!
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ.…























