ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ. ಈ ರಜೆಗಳ ಸಂದರ್ಭ ಬೆಂಗಳೂರು ಮತ್ತು ಮಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತದೆ. ಹೀಗಾಗಿ, ಸಾರ್ವಜನಿಕರ ಬೇಡಿಕೆ ಮೇರೆಗೆ ಬೆಂಗಳೂರು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ.
ಈ ಬಗ್ಗೆ ನೈಋತ್ಯ ರೈಲ್ವೆಯು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿದೆ. ಯಾವ್ಯಾವ ಜಿಲ್ಲೆಗಳಿಗೆ ವಿಶೇಷ ರೈಲು ಓಡಿಸಲಾಗುತ್ತದೆ? ಮಾಹಿತಿ ಇಲ್ಲಿದೆ.
ಬೆಂಗಳೂರು-ಮಡಗಾಂವ್ ಎಕ್ಸ್ಪ್ರೆಸ್
• ರೈಲು ಸಂಖ್ಯೆ 06569: ಎಸ್ಎಮ್ವಿಟಿ ಬೆಂಗಳೂರು-ಮಡಗಾಂವ್ ರೈಲು ಆಗಸ್ಟ್ 26 ರಂದು ಎಸ್ಎಮ್ವಿಟಿ ಬೆಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ನಸುಕಿನ ಜಾವ 5:30ಕ್ಕೆ ಮಡಗಾಂವ್ ತಲುಪಲಿದೆ.
• ಇದೇ ರೈಲು ವಾಪಸ್ 06570: ಆಗಸ್ಟ್ 27 ರಂದು ಬೆಳಿಗ್ಗೆ 6:30ಕ್ಕೆ ಮಡಗಾಂವ್ನಿಂದ ಹೊರಟು ಅದೇ ದಿನ ರಾತ್ರಿ 11:40 ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ.
ರೈಲು ನಿಲುಗಡೆ
ಈ ರೈಲು ಚಿಕ್ಕಬಾನಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಬೆಂಗಳೂರು-ಬೀದರ್
• ರೈಲು ಸಂಖ್ಯೆ 06549: ಎಸ್ಎಮ್ವಿಟಿ ಬೆಂಗಳೂರು-ಬೀದರ್ ರೈಲು ಆಗಸ್ಟ್ 26 ರಂದು ರಾತ್ರಿ 9:15ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ತಲುಪಲಿದೆ.
• ಇದೇ ರೈಲು ವಾಪಸ್ 06550: ಬೀದರ್ನಿಂದ ಆಗಸ್ಟ್ 27 ರಂದು ಮಧ್ಯಾಹ್ನ 2:30ಕ್ಕೆ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ.
ರೈಲು ನಿಲುಗಡೆ
ಯಲಹಂಕ, ಹಿಂದುಪುರ, ಧರ್ಮಾವರಮ್, ಅನಂತಪುರ, ಗುಂಟಕಲ್, ಅದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಬೆಂಗಳೂರು-ಹುಬ್ಬಳ್ಳಿ
• ರೈಲು ಸಂಖ್ಯೆ 07341: ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ರೈಲು ಆಗಸ್ಟ್ 25 ರಂದು ಮಧ್ಯಾಹ್ನ 3:30 ಕ್ಕೆ ಯಶವಂತಪುರದಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಹುಬ್ಬಳ್ಳಿ ತಲುಪಲಿದೆ.
• ರೈಲು ಸಂಖ್ಯೆ 07342: ಯಶವಂತಪುರ- ಎಸ್ಎಸ್ಎಸ್ ಹುಬ್ಬಳ್ಳಿ ರೈಲು ಆಗಸ್ಟ್ 28 ರಂದು ಯಶವಂತಪುರದಿಂದ ಮಧ್ಯರಾತ್ರಿ 12:15 ಕ್ಕೆ ಹೊರಟು ಬೆಳಿಗ್ಗೆ 09:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.
ರೈಲು ನಿಲುಗಡೆ
ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ಎರಡೂ ದಿಕ್ಕುಗಳಲ್ಲಿ ನಿಲ್ಲುತ್ತದೆ. ಬೆಂಗಳೂರು-ಮಂಗಳೂರು
ಬೆಂಗಳೂರು-ಮಂಗಳೂರು
• ರೈಲು ಸಂಖ್ಯೆ 06251: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಯಶವಂತಪುರದಿಂದ ಆಗಸ್ಟ್ 25 ರಂದು ರಾತ್ರಿ 11:55ಕ್ಕೆ ಮರುದಿನ ಬೆಳಗ್ಗೆ 11:45 ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪುತ್ತದೆ.
• ರೈಲು ಸಂಖ್ಯೆ 06252: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 26 ರಂದು ಮಧ್ಯಾಹ್ನ 1ಗಂಟೆಗೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಯಶವಂತಪುರ ತಲುಪುತ್ತದೆ.
• ರೈಲು ಸಂಖ್ಯೆ 06253: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಆಗಸ್ಟ್ 26 ರಂದು ಯಶವಂತಪುರದಿಂದ ರಾತ್ರಿ 11:55 ಕ್ಕೆ ಹೊರಟು ಮರುದಿನ ಬೆಳಗ್ಗೆ 11:45 ಮಂಗಳೂರು ಸೆಂಟ್ರಲ್ ತಲುಪುತ್ತದೆ.
• ರೈಲು ಸಂಖ್ಯೆ 06254: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 27 ರಂದು ಮಧ್ಯಾಹ್ನ 2:15 ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 11:50 ಕ್ಕೆ ಯಶವಂತಪುರ ತಲುಪಲಿದೆ.
ರೈಲು ನಿಲುಗಡೆ
ಈ ರೈಲುಗಳು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟವಾಳದಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆಗಳಿವೆ.
ರೈಲು ಸಂಚಾರ ದಿನಾಂಕ ವಿಸ್ತರಣೆ
• ಈ ಹಿಂದೆ ಆಗಸ್ಟ್ 31 ರವರೆಗೆ ಸಂಚರಿಸುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 06539 SMVT ಬೆಂಗಳೂರು-ಬೀದರ್ ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು, ಸೆಪ್ಟೆಂಬರ್ 05 ರಿಂದ 28 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಸೆಪ್ಟೆಂಬರ್ 01 ರವರೆಗೆ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 06540 ಬೀದರ್-SMVT ಬೆಂಗಳೂರು ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ಸೆಪ್ಟೆಂಬರ್ 06 ರಿಂದ 29 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಆಗಸ್ಟ್ 25 ರವರೆಗೆ ಮಾತ್ರ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 07315 SSS ಹುಬ್ಬಳ್ಳಿ-ಮುಜಫರ್ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 01 ರಿಂದ 22 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಆಗಸ್ಟ್ 28 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07316 ಮುಜಫರ್ಪುರ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 04 ರಿಂದ 12 ರವರೆಗೆ ಓಡಲಿದೆ.
• ಈ ಹಿಂದೆ ಆಗಸ್ಟ್ 25 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07311 ವಾಸ್ಕೋ ಡ ಗಾಮಾ-ಮುಜಫರ್ ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 8 ರಿಂದ 22 ರವರೆಗೆ ಓಡಲಿದೆ.
- Home
- ರಾಜ್ಯ ವಾರ್ತೆ
- ಹಬ್ಬಗಳ ಸಾಲು: ಬೆಂಗಳೂರು, ಮಂಗಳೂರಿನಿಂದ ವಿಶೇಷ ರೈಲು – ವಿವರ ಹೀಗಿದೆ
ಹಬ್ಬಗಳ ಸಾಲು: ಬೆಂಗಳೂರು, ಮಂಗಳೂರಿನಿಂದ ವಿಶೇಷ ರೈಲು – ವಿವರ ಹೀಗಿದೆ
What's your reaction?
- 3094c
- 3094cc
- 29ai technology
- 29ajjavara
- 29alwas
- 28apology
- 28artificial intelegence
- 27avg
- 27bihar minister
- 26bjp
- 26bjp leader
- 25bjp national president
- 25bt ranjan
- 24co-operative
- 24coastal
- 23crime
- 23crime news
- 23cyclothon
- 22darmasthala
- 22death news
- 21dust bin
- 21education
- 20fraud
- 20gl
- 19gods own country
- 19gold
- 18google for education
- 18independence
- 17jewel
- 17jewellers
- 17jnana vikasa
- 16karnataka state
- 16kerala village
- 15kukke - kollur temple
- 15lokayuktha
- 14lokayuktha raid
- 14manipal
- 13minister krishna bairegowda
- 13mla ashok rai
- 12mohan alwa
- 12mudubidre
- 12nidana news
- 11nirvathu mukku
- 11nitin nabin
- 10police
- 10ptr tahasildar
- 9puttur
- 9puttur news
- 8puttur tahasildar
- 8republic
- 7revenue
- 7revenue department
- 6revenue minister
- 6school
- 6senior citizen
- 5silver
- 5society
- 4sowmya
- 4students
- 3tahasildar
- 3tahasildar absconded
- 2teachers
- 2tour
- 1trending
- 1udupi
- 0wastage
Related Posts
ಎಚ್ಚರ ಗ್ರಾಹಕರೇ: ವಾಟ್ಸ್ ಆ್ಯಪ್’ನಲ್ಲಿ ಹರಿದಾಡುತ್ತಿದೆ ನಕಲಿ ಆದಾಯ ತೆರಿಗೆ ನೋಟಿಸ್!!
ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿ ಮುಕ್ತಾಯಗೊಳ್ಳುತ್ತಿರುವ ಬೆನ್ನಲ್ಲೇ ಸೈಬರ್ ವಂಚಕರು…
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ
ಪುತ್ತೂರು: ಈ ಬಾರಿಯ ದಸರಾಜೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ…
ಹಳ್ಳದಲ್ಲಿ ಕಳೆದ ಹೋದ ಕಂದಮ್ಮ; 12 ಗಂಟೆ ಬಳಿಕ ಪತ್ತೆ!
ಮೂಡಿಗೆರೆ ತಾಲೂಕಿನ ಕೆಳಗೂರು ಕಾಫಿ ಎಸ್ಟೇಟ್ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ…
ಮದುವೆ ಮನೆಯಲ್ಲೀಗ ಸೂತಕದ ಛಾಯೆ!! ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣು!
ಮದುವೆಗೆ ಸಿದ್ಧವಾಗಿದ್ದ ವಧುವಿಗೆ ವ್ಯಕ್ತಿಯೋರ್ವ ನೀಡಿದ ಕಿರುಕುಳದಿಂದ ಬೇಸತ್ತು ಮನೆಮಂದಿ…
ಅಂಬಾರಿ ಹೊರುವ ಅಭಿಮನ್ಯುವಿನ ದಂತ ಭಗ್ನ!!
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯ ಚಿನ್ನದ ಅಂಬಾರಿ ಹೊರುವ ಗಜಪಡೆಯ ನಾಯಕ ‘ಅಭಿಮನ್ಯು’…
1 ವರ್ಷದ ಮಗು ರೈಲಿನಲ್ಲಿ ಏಕಾಂಗಿ ಪ್ರಯಾಣ! 7 ಸಾವಿರ ರೂ. ದಂಡ ವಿಧಿಸಿದ ರೈಲ್ವೇ!!
ಬೆಂಗಳೂರು: ಟ್ರೈನ್ ಟಿಕೆಟ್ ಬುಕ್ ಮಾಡುವಾಗ ಮಾಡಿದ ಒಂದು ಸಣ್ಣ ತಪ್ಪು ಬೆಂಗಳೂರು ಮೂಲದ…
ನೀರಿನಲ್ಲಿ ಆಟವಾಡುತ್ತಾ ತುಂಟಾಟ ಮೆರೆದ ಸುಬ್ರಹ್ಮಣ್ಯ ದೇವಳದ ಯಶಸ್ವಿ| ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಗುರುವಾರ (ಡಿ.12)…
ಮುಂಬೈಯಿಂದ ಮಂಗಳೂರಿನ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ: ಉಡುಪಿಯ ಅಖಿಲೇಶ್ ಖಾಕಿ ಬಲೆಗೆ
ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲರ್ ಖಾಕಿ ಬಲೆಗೆ…
ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ: ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!
ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…
ನೇಣಿಗೆ ಕೊರಳೊಡ್ಡಿದ 6 ತಿಂಗಳ ಗರ್ಭಿಣಿ!!
ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಂಡನ ಮನೆಯಲ್ಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ…























