ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ. ಈ ರಜೆಗಳ ಸಂದರ್ಭ ಬೆಂಗಳೂರು ಮತ್ತು ಮಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತದೆ. ಹೀಗಾಗಿ, ಸಾರ್ವಜನಿಕರ ಬೇಡಿಕೆ ಮೇರೆಗೆ ಬೆಂಗಳೂರು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ.
ಈ ಬಗ್ಗೆ ನೈಋತ್ಯ ರೈಲ್ವೆಯು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿದೆ. ಯಾವ್ಯಾವ ಜಿಲ್ಲೆಗಳಿಗೆ ವಿಶೇಷ ರೈಲು ಓಡಿಸಲಾಗುತ್ತದೆ? ಮಾಹಿತಿ ಇಲ್ಲಿದೆ.
ಬೆಂಗಳೂರು-ಮಡಗಾಂವ್ ಎಕ್ಸ್ಪ್ರೆಸ್
• ರೈಲು ಸಂಖ್ಯೆ 06569: ಎಸ್ಎಮ್ವಿಟಿ ಬೆಂಗಳೂರು-ಮಡಗಾಂವ್ ರೈಲು ಆಗಸ್ಟ್ 26 ರಂದು ಎಸ್ಎಮ್ವಿಟಿ ಬೆಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ನಸುಕಿನ ಜಾವ 5:30ಕ್ಕೆ ಮಡಗಾಂವ್ ತಲುಪಲಿದೆ.
• ಇದೇ ರೈಲು ವಾಪಸ್ 06570: ಆಗಸ್ಟ್ 27 ರಂದು ಬೆಳಿಗ್ಗೆ 6:30ಕ್ಕೆ ಮಡಗಾಂವ್ನಿಂದ ಹೊರಟು ಅದೇ ದಿನ ರಾತ್ರಿ 11:40 ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ.
ರೈಲು ನಿಲುಗಡೆ
ಈ ರೈಲು ಚಿಕ್ಕಬಾನಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಬೆಂಗಳೂರು-ಬೀದರ್
• ರೈಲು ಸಂಖ್ಯೆ 06549: ಎಸ್ಎಮ್ವಿಟಿ ಬೆಂಗಳೂರು-ಬೀದರ್ ರೈಲು ಆಗಸ್ಟ್ 26 ರಂದು ರಾತ್ರಿ 9:15ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ತಲುಪಲಿದೆ.
• ಇದೇ ರೈಲು ವಾಪಸ್ 06550: ಬೀದರ್ನಿಂದ ಆಗಸ್ಟ್ 27 ರಂದು ಮಧ್ಯಾಹ್ನ 2:30ಕ್ಕೆ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ.
ರೈಲು ನಿಲುಗಡೆ
ಯಲಹಂಕ, ಹಿಂದುಪುರ, ಧರ್ಮಾವರಮ್, ಅನಂತಪುರ, ಗುಂಟಕಲ್, ಅದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಬೆಂಗಳೂರು-ಹುಬ್ಬಳ್ಳಿ
• ರೈಲು ಸಂಖ್ಯೆ 07341: ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ರೈಲು ಆಗಸ್ಟ್ 25 ರಂದು ಮಧ್ಯಾಹ್ನ 3:30 ಕ್ಕೆ ಯಶವಂತಪುರದಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಹುಬ್ಬಳ್ಳಿ ತಲುಪಲಿದೆ.
• ರೈಲು ಸಂಖ್ಯೆ 07342: ಯಶವಂತಪುರ- ಎಸ್ಎಸ್ಎಸ್ ಹುಬ್ಬಳ್ಳಿ ರೈಲು ಆಗಸ್ಟ್ 28 ರಂದು ಯಶವಂತಪುರದಿಂದ ಮಧ್ಯರಾತ್ರಿ 12:15 ಕ್ಕೆ ಹೊರಟು ಬೆಳಿಗ್ಗೆ 09:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.
ರೈಲು ನಿಲುಗಡೆ
ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ಎರಡೂ ದಿಕ್ಕುಗಳಲ್ಲಿ ನಿಲ್ಲುತ್ತದೆ. ಬೆಂಗಳೂರು-ಮಂಗಳೂರು
ಬೆಂಗಳೂರು-ಮಂಗಳೂರು
• ರೈಲು ಸಂಖ್ಯೆ 06251: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಯಶವಂತಪುರದಿಂದ ಆಗಸ್ಟ್ 25 ರಂದು ರಾತ್ರಿ 11:55ಕ್ಕೆ ಮರುದಿನ ಬೆಳಗ್ಗೆ 11:45 ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪುತ್ತದೆ.
• ರೈಲು ಸಂಖ್ಯೆ 06252: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 26 ರಂದು ಮಧ್ಯಾಹ್ನ 1ಗಂಟೆಗೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಯಶವಂತಪುರ ತಲುಪುತ್ತದೆ.
• ರೈಲು ಸಂಖ್ಯೆ 06253: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಆಗಸ್ಟ್ 26 ರಂದು ಯಶವಂತಪುರದಿಂದ ರಾತ್ರಿ 11:55 ಕ್ಕೆ ಹೊರಟು ಮರುದಿನ ಬೆಳಗ್ಗೆ 11:45 ಮಂಗಳೂರು ಸೆಂಟ್ರಲ್ ತಲುಪುತ್ತದೆ.
• ರೈಲು ಸಂಖ್ಯೆ 06254: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 27 ರಂದು ಮಧ್ಯಾಹ್ನ 2:15 ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 11:50 ಕ್ಕೆ ಯಶವಂತಪುರ ತಲುಪಲಿದೆ.
ರೈಲು ನಿಲುಗಡೆ
ಈ ರೈಲುಗಳು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟವಾಳದಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆಗಳಿವೆ.
ರೈಲು ಸಂಚಾರ ದಿನಾಂಕ ವಿಸ್ತರಣೆ
• ಈ ಹಿಂದೆ ಆಗಸ್ಟ್ 31 ರವರೆಗೆ ಸಂಚರಿಸುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 06539 SMVT ಬೆಂಗಳೂರು-ಬೀದರ್ ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು, ಸೆಪ್ಟೆಂಬರ್ 05 ರಿಂದ 28 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಸೆಪ್ಟೆಂಬರ್ 01 ರವರೆಗೆ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 06540 ಬೀದರ್-SMVT ಬೆಂಗಳೂರು ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ಸೆಪ್ಟೆಂಬರ್ 06 ರಿಂದ 29 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಆಗಸ್ಟ್ 25 ರವರೆಗೆ ಮಾತ್ರ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 07315 SSS ಹುಬ್ಬಳ್ಳಿ-ಮುಜಫರ್ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 01 ರಿಂದ 22 ರವರೆಗೆ ಸಂಚರಿಸಲಿದೆ.
• ಈ ಹಿಂದೆ ಆಗಸ್ಟ್ 28 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07316 ಮುಜಫರ್ಪುರ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 04 ರಿಂದ 12 ರವರೆಗೆ ಓಡಲಿದೆ.
• ಈ ಹಿಂದೆ ಆಗಸ್ಟ್ 25 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07311 ವಾಸ್ಕೋ ಡ ಗಾಮಾ-ಮುಜಫರ್ ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 8 ರಿಂದ 22 ರವರೆಗೆ ಓಡಲಿದೆ.
- Home
- ರಾಜ್ಯ ವಾರ್ತೆ
- ಹಬ್ಬಗಳ ಸಾಲು: ಬೆಂಗಳೂರು, ಮಂಗಳೂರಿನಿಂದ ವಿಶೇಷ ರೈಲು – ವಿವರ ಹೀಗಿದೆ
ಹಬ್ಬಗಳ ಸಾಲು: ಬೆಂಗಳೂರು, ಮಂಗಳೂರಿನಿಂದ ವಿಶೇಷ ರೈಲು – ವಿವರ ಹೀಗಿದೆ
What's your reaction?
- 3094c
- 2994cc
- 29ai technology
- 28ajjavara
- 28alwas
- 27apology
- 27artificial intelegence
- 27avg
- 26bihar minister
- 26bjp
- 25bjp leader
- 25bjp national president
- 24bt ranjan
- 24co-operative
- 23coastal
- 23crime
- 23crime news
- 22cyclothon
- 22darmasthala
- 21death news
- 21dust bin
- 20education
- 20fraud
- 19gl
- 19gods own country
- 18gold
- 18google for education
- 18independence
- 17jewel
- 17jewellers
- 16jnana vikasa
- 16karnataka state
- 15kerala village
- 15kukke - kollur temple
- 14lokayuktha
- 14lokayuktha raid
- 14manipal
- 13minister krishna bairegowda
- 13mla ashok rai
- 12mohan alwa
- 12mudubidre
- 11nidana news
- 11nirvathu mukku
- 10nitin nabin
- 10police
- 9ptr tahasildar
- 9puttur
- 9puttur news
- 8puttur tahasildar
- 8republic
- 7revenue
- 7revenue department
- 6revenue minister
- 6school
- 5senior citizen
- 5silver
- 5society
- 4sowmya
- 4students
- 3tahasildar
- 3tahasildar absconded
- 2teachers
- 2tour
- 1trending
- 1udupi
- 0wastage
Related Posts
ಗಾಂಜಾ ಆರೋಪಕ್ಕೆ ವಿದ್ಯಾರ್ಥಿ ಬಲಿ: ಮೂವರು ಪೊಲೀಸರ ಅಮಾನತು!!
ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್…
ಚಾರಣಕ್ಕೆ ತೆರಳಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಪತ್ತೆ! ಫಲಿಸಿದ ಕಾವು ಬಂಗ್ಲೆಗುಡ್ಡೆ ಮಾರಿಗುಡಿ ದೈವಸ್ಥಾನದಲ್ಲಿ ನಡೆದ ಪ್ರಾರ್ಥನೆ!
ತಡಿಯಾಂಡಮೋಳ್ ಟ್ರೆಕ್ಕಿಂಗಿಗೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಅವರು…
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ | ಕನ್ನಡತಿಯರಿಗೆ ಸಿಗದ ಮಣೆ: ರಶ್ಮಿಕಾ ಮಂದಣ್ಣ ನಿರಾಕರಣೆಗೆ ಕಾರಣ ನೀಡಿದ ಸಚಿವ!
ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ನ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ…
ತೆರವುಗೊಳಿಸಿದ್ದ ಜಾಗದಲ್ಲೇ ಹನುಮಧ್ವಜ ಹಾರಿಸಿದ ಸಂಸದ ಅನಂತ ಕುಮಾರ್ ಹೆಗಡೆ!!
ಭಟ್ಕಳ: ಸ್ಥಳೀಯ ಆಡಳಿತ ಧ್ವಜ ತೆರವು ಮಾಡಿದ್ದ ಜಾಗದಲ್ಲೇ ಸೋಮವಾರ ಬಿಜೆಪಿ ಸಂಸದ ಅನಂತ್ ಕುಮಾರ್…
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ
ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ…
ಆಯುಷ್ಮಾನ್ ಭಾರತ್: ಈ ಎರಡು ಆಸ್ಪತ್ರೆಗೆ ಇನ್ನು ಸರಕಾರಿ ಆಸ್ಪತ್ರೆಯ ಶಿಫಾರಸ್ಸು ಬೇಡ!!
ಬೆಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ…
ಶಿರಾಡಿ ಘಾಟ್’ನಲ್ಲಿ ರೈಲ್ವೇ ವಿದ್ಯುತ್ ಕಾಮಗಾರಿ: ಹಗಲು ಓಡಾಟದ ರೈಲುಗಳ ರದ್ಧತಿ ವಿಸ್ತರಣೆ!
ಮಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ…
ಎಲ್.ಪಿ.ಜಿ. ಗ್ಯಾಸ್ ದರ ಏರಿಕೆ: ಕಾಂಗ್ರೆಸ್ ಪ್ರತಿಭಟನೆ!
ಬೆಂಗಳೂರು: ಎಲ್.ಪಿ.ಜಿ. ಗ್ಯಾಸ್ ಸಿಲಿಂಡರ್ ದರವನ್ನು 60 ರೂ ಏರಿಕೆ ಹಿನ್ನೆಲೆಯಲ್ಲಿ ಯುವ…
ಬಾಲಕನ ಮೇಲೆ ನಾಯಿ ದಾಳಿ: ಮಾಲಕನ ವಿರುದ್ಧ ಕೇಸ್!
ಬ್ರೆಡ್ ತರಲು ಹೋಗಿದ್ದ ಬಾಲಕನೊಬ್ಬನಿಗೆ ಸಾಕು ನಾಯಿಯೊಂದು ಕಚ್ಚಿದ್ದು, ಬಾಲಕ ಗಂಭೀರವಾಗಿ…
ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ!
ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ…





















