ರಾಜ್ಯ ವಾರ್ತೆ

ನೀರು ಕುಡಿಯಲು ಪ್ರೋತ್ಸಾಹ; ರಾಜ್ಯದ ಶಾಲೆಗಳಲ್ಲೂ “ವಾಟರ್ ಬೆಲ್” ಅನುಷ್ಠಾನ!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟ‌ರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

akshaya college

ಕೇರಳ ಶಾಲೆಗಳಲ್ಲಿ ಈಗಾಗಲೇ ‘ವಾಟರ್ ಬೆಲ್’ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು ಬಾರಿ ಕೇರಳದ ಶಾಲೆಗಳಲ್ಲಿ ವಾಟರ್ಅ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯಬೇಕು.

ಕೇರಳದಲ್ಲಿ ಪ್ರಾರಂಭ ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ತರಲು ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಶಾಲೆಗಳಲ್ಲಿ ಮಕ್ಕಳು ಹೆಚ್ಚು ನೀರು ಕುಡಿಯಲು ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶ.

ಮಕ್ಕಳು ಹೆಚ್ಚು ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಹೀಗಾಗಿ, ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು.

ಕೇರಳದಲ್ಲಿ ದಿನಕ್ಕೆ ಎರಡು ಬಾರಿ ವಾಟರ್ ಬೆಲ್ ಮಾಡೋ ಮೂಲಕ ಮಕ್ಕಳು ನೀರು ಕುಡಿಯಲು ಉತ್ತೇಜಿಸಲಾಗುತ್ತಿದೆ.

ದಿನಕ್ಕೆ 2-3 ಬಾರಿ ವಾಟರ್ ಬೆಲ್ ಹೊಡೆದು ಮಕ್ಕಳಿಗೆ ಆರೋಗ್ಯದ ಕಾಳಜಿ ಜತೆ ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts