ರಾಜ್ಯ ವಾರ್ತೆ

ಬಾಲಕನ ಮೇಲೆ ನಾಯಿ ದಾಳಿ: ಮಾಲಕನ ವಿರುದ್ಧ ಕೇಸ್!

GL

ಈ ಸುದ್ದಿಯನ್ನು ಶೇರ್ ಮಾಡಿ

ಬ್ರೆಡ್ ತರಲು ಹೋಗಿದ್ದ ಬಾಲಕನೊಬ್ಬನಿಗೆ ಸಾಕು ನಾಯಿಯೊಂದು ಕಚ್ಚಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

chennai-shopping
maithri

ಬೆಂಗಳೂರಿನ ರಾಜಾಜಿನಗರದಲ್ಲಿ ಈ ಘಟನೆ ನಡೆದಿದೆ. ರಾಜಾಜಿನಗರದ 1ನೇ ಬ್ಲಾಕ್​ನಲ್ಲಿ ವಾಸವಿರುವ 11 ವರ್ಷದ ಬಾಲಕ ಬ್ರೆಡ್ ತರುವುದಕ್ಕಾಗಿ ಮನೆಯಿಂದ ಹೊರಹೋಗಿದ್ದ. ಸ್ವಲ್ಪ ದೂರ ಹೋಗ್ತಿದ್ದಂತೆ ರಸ್ತೆಯಲ್ಲಿ ತನ್ನ ಮಾಲೀಕರೊಂದಿಗೆ ವಾಕ್ ಮಾಡ್ತಿದ್ದ ಶ್ವಾನವೊಂದು ದಾಳಿ ಮಾಡಿದೆ. ಬಾಲಕನ ತೊಡೆಗೆ ನಾಯಿ ಕಚ್ಚಿ ಗಾಯಗೊಳಿಸಿದೆ.

ಘಟನೆ ಸಂಭವಿಸಿದರೂ ಶ್ವಾನದ ಮಾಲೀಕರು ಬಾಲಕನಿಗೆ ಚಿಕಿತ್ಸೆ ಕೂಡ ಕೊಡಿಸಿರಲಿಲ್ಲ‌. ಹೀಗಾಗಿ, ಕುಟುಂಬಸ್ಥರೇ ಚಿಕಿತ್ಸೆ ವೆಚ್ಚ ಭರಿಸಿದ್ದರು. ಇದೀಗ ಬಾಲಕನ ಪೋಷಕರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ನಾಯಿ ಮಾಲೀಕನ ವಿರುದ್ಧ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಯಿಯ ಮಾಲೀಕನಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…