ರಾಜ್ಯ ವಾರ್ತೆ

ಡಾ. ಕೆ. ಎನ್. ಅಡಿಗ ಅವರಿಗೆ ‘ಗಾನಸಿರಿ ಕರ್ನಾಟಕ ಭೂಷಣ’ ಪ್ರಶಸ್ತಿ ಪ್ರದಾನ

GL

ಈ ಸುದ್ದಿಯನ್ನು ಶೇರ್ ಮಾಡಿ

​ಬೆಂಗಳೂರು: ಪುತ್ತೂರಿನ ಗಾನಸಿರಿ ಕಲಾ ಕೇಂದ್ರದ ರಜತ ವರ್ಷದ ಅಂಗವಾಗಿ ಆಯೋಜಿಸಿದ್ದ ‘ಗಾನಸಿರಿ ಗಾನ ನೃತ್ಯ ಸಮ್ಮಿಲನ’ ಸಮಾರಂಭದಲ್ಲಿ ಕಾರ್ಯಕ್ರಮ ನಿರೂಪಕ ಹಾಗೂ ಸಾಂಸ್ಕೃತಿಕ ಸಂಘಟಕ ಡಾ. ಕೆ. ಎನ್. ಅಡಿಗ ಅವರಿಗೆ ‘ಗಾನಸಿರಿ ಕರ್ನಾಟಕ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

chennai-shopping
maithri

ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ಈ ಅದ್ಧೂರಿ ಸಮಾರಂಭವು ಬೆಂಗಳೂರಿನ ‘ಡ್ಯಾನ್ಸ್ ಬೀಟ್ಸ್’ ನೃತ್ಯ ಸಂಸ್ಥೆಯ ಸಹಯೋಗದೊಂದಿಗೆ ಜರುಗಿತು.

ಡಾ. ಕೆ. ಎನ್. ಅಡಿಗ ಅವರು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅನನ್ಯ ಸೇವೆ, ಅವರ ಚತುರ ನಿರೂಪಣೆ ಹಾಗೂ ಸಂಘಟನಾ ಚಾತುರ್ಯವನ್ನು ಗುರುತಿಸಿ ಈ ಗೌರವವನ್ನು ನೀಡಲಾಯಿತು.

ಸಮಾರಂಭದಲ್ಲಿ ಸುಗಮ ಸಂಗೀತಜ್ಞೆ ಹಾಗೂ ಸಂಗೀತ ನಿರ್ದೇಶಕಿ ಡಾ. ಜಯಶ್ರೀ ಅರವಿಂದ್, ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಗಾನ ಸಿರಿ ಸಂಸ್ಥೆಯ ಕಿರಣ್ ಕುಮಾರ್

ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗಾನ ಮತ್ತು ನೃತ್ಯಗಳ ಅಪೂರ್ವ ಸಮ್ಮಿಲನ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…