ರಾಜ್ಯ ವಾರ್ತೆ

ಕೈಕೊಟ್ಟ ಪ್ರೇಯಸಿ: ಊರವರಿಗೆ ಪ್ರೇಮಿಯಿಂದ ‘ಹೈಟೆನ್ಷನ್’!!

GL

ಈ ಸುದ್ದಿಯನ್ನು ಶೇರ್ ಮಾಡಿ

ಹುಡುಗಿ ಕೈಕೊಟ್ಟಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ಕಂಬ ಏರಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನ ಪಾಳ್ಯದಲ್ಲಿ ನಡೆದಿದೆ.

maithri

ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನ ಪ್ರೀತಿಸುತ್ತಿದ್ದ. ಇತ್ತೀಚಿಗೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಲವ್ ಬ್ರೇಕಪ್ ಮಾಡಿಕೊಳ್ಳಲು ಯುವತಿ ಮುಂದಾದ ಹಿನ್ನೆಲೆ ಸೋಮಶೇಖರ್ ಮನೆಯ ಶೀಟ್ ಹೊಡೆದು ದಾಂಧಲೆ ಮಾಡಿದ್ದಾನೆ. ಬಳಿಕ ಮನೆ ಸಮೀಪದ ಹೈಟೆನ್ಷನ್ ಕಂಬ ಹತ್ತಿ ಹುಡುಗಿ ಬರೋವರೆಗೆ ಕೆಳಗೆ ಇಳಿಯುವುದಿಲ್ಲ ಎಂದಿದ್ದಾನೆ.

ಆನೇಕಲ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಮನವೊಲಿಸಿದರೂ ಪಾಗಲ್ ಪ್ರೇಮಿ ಕೆಳಗಿಳಿಯಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ತಂಡ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಗ್ರಾಮಾಸ್ಥರು ಜಮಾಯಿಸಿದ್ದು, ಯುವಕನನ್ನು ಕೆಳಗಿಳಿಸಲು ಶತಪ್ರಯತ್ನ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್‌ ನಾಯಕ್ ಇಂದಾಜೆ ನೇಮಕ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್‌ ಪಾಸ್‌ ವಿತರಣೆ ಮಾಡಲು ಸರಕಾರ ರಚಿಸಿರುವ…

ದೇವಳ ಪಕ್ಕದಲ್ಲಿ ಸರಕಾರಿ ಶಾಲೆ: ಬಿಸಿಯೂಟದ ಮೊಟ್ಟೆಗೆ ಕುತ್ತು! ವಿದ್ಯಾರ್ಥಿಗಳಿಂದ ಶಾಲೆ ತೊರೆಯುವ ಸಾಮೂಹಿಕ ಬೆದರಿಕೆ!!

ಮಧ್ಯಾಹ್ನದ ಬಿಸಿ ಊಟದ ಯೋಜನೆ ಹಿನ್ನೆಲೆಯಲ್ಲಿ ದೇವಾಲಯದ ಪಕ್ಕದಲ್ಲಿರುವ ಸರ್ಕಾರಿ ಶಾಲೆಯೊಂದರ…