ತಾನು ಗೃಹ ಸಚಿವನಾಗಿ ಇರುವವರೆಗೂ ಕರ್ನಾಟಕದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಸಂಘಟನೆ ಕಾಗದಗಳು ಎಲ್ಲೋ ಇರಬಹುದು. ಹುಡುಕುತ್ತಿದ್ದಾರೆ ಹುಡುಕಿಕೊಂಡು ಬರಲಿ. ಇಷ್ಟು ಕೇಳಿದ್ದಕ್ಕೆ ನನ್ನ ವೈಯಕ್ತಿಕ ಮಾಹಿತಿ ಕೆದಕುತ್ತಿದ್ದಾರೆ. ಪ್ರಿಯಾಂಕ್ ಯಾರನ್ನು ಮದುವೆಯಾಗಿದ್ದು, ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾನಾ, ಬೆಳ್ಳಗಿದ್ದಾನಾ ಎಲ್ಲಾ ಕೆದಕುತ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವ ವ್ಯಕ್ತಿಯಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಆರ್ಎಸ್ಎಸ್ನವರು ಧ್ವಜದ ಮೇಲೆ ದೇಣಿಗೆ ತೆಗೆದುಕೊಳ್ತಾರೆ. ದೇಣಿಗೆ ಪಡೆದುಕೊಳ್ಳೋಕೆ ಇವರ ಗುರು ಯಾರು? ಹಾಗಿದ್ರೆ ಇವರಗೆ ಲೆಕ್ಕ ಕೇಳಬಾರದಾ ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ. ನಾಳೆ ನೀವೂ ಒಂದು ಧ್ವಜದ ಮೇಲೆ ಸಂಘಟನೆ ಮಾಡಿ, ಚಂದಾ ಕಲೆಕ್ಟ್ ಮಾಡಿ. ಅವಾಗ ಐಟಿ, ಇಡಿಯವರು ಸುಮ್ನೆ ಕೂರುತ್ತಾರಾ? ಎಲ್ಲರೂ ಹೀಗೇ ಮಾಡಲಿ ಅವಾಗ ನೋಡೋಣ ಎಂದವರು ಕಿಡಿ ಕಾರಿದ್ದಾರೆ.





















