ರಾಜ್ಯ ವಾರ್ತೆ

ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಮೋಹನ್ ಭಾಗವತ್’ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ!

ಈ ಸುದ್ದಿಯನ್ನು ಶೇರ್ ಮಾಡಿ

ತಾನು ಗೃಹ ಸಚಿವನಾಗಿ ಇರುವವರೆಗೂ ಕರ್ನಾಟಕದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

maithri

ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಸಂಘಟನೆ ಕಾಗದಗಳು ಎಲ್ಲೋ ಇರಬಹುದು. ಹುಡುಕುತ್ತಿದ್ದಾರೆ ಹುಡುಕಿಕೊಂಡು ಬರಲಿ. ಇಷ್ಟು ಕೇಳಿದ್ದಕ್ಕೆ ನನ್ನ ವೈಯಕ್ತಿಕ ಮಾಹಿತಿ ಕೆದಕುತ್ತಿದ್ದಾರೆ. ಪ್ರಿಯಾಂಕ್ ಯಾರನ್ನು ಮದುವೆಯಾಗಿದ್ದು, ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾನಾ, ಬೆಳ್ಳಗಿದ್ದಾನಾ ಎಲ್ಲಾ ಕೆದಕುತ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವ ವ್ಯಕ್ತಿಯಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರ್​​ಎಸ್​​ಎಸ್​​ನವರು ಧ್ವಜದ ಮೇಲೆ ದೇಣಿಗೆ ತೆಗೆದುಕೊಳ್ತಾರೆ. ದೇಣಿಗೆ ಪಡೆದುಕೊಳ್ಳೋಕೆ ಇವರ ಗುರು ಯಾರು? ಹಾಗಿದ್ರೆ ಇವರಗೆ ಲೆಕ್ಕ ಕೇಳಬಾರದಾ ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ. ನಾಳೆ ನೀವೂ ಒಂದು ಧ್ವಜದ ಮೇಲೆ ಸಂಘಟನೆ ಮಾಡಿ, ಚಂದಾ ಕಲೆಕ್ಟ್‌ ಮಾಡಿ. ಅವಾಗ ಐಟಿ, ಇಡಿಯವರು ಸುಮ್ನೆ ಕೂರುತ್ತಾರಾ? ಎಲ್ಲರೂ ಹೀಗೇ ಮಾಡಲಿ ಅವಾಗ ನೋಡೋಣ ಎಂದವರು ಕಿಡಿ ಕಾರಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನೋಟರಿ ವಕೀಲರಿಗೆ ಸ್ಪಷ್ಟ ಸೂಚನೆ ನೀಡಿದ ಸಚಿವಾಲಯ!!  ಅಷ್ಟಕ್ಕೂ ಸಚಿವಾಲಯ ನೀಡಿದ ಸೂಚನೆಯಾದರೂ ಏನು ಗೊತ್ತೇ??

ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ನೋಟರಿ ವಕೀಲರಿಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು…