ಕರಾವಳಿರಾಜ್ಯ ವಾರ್ತೆ

ರೈಲು ಡಿಕ್ಕಿ: ನಾಲ್ಕು ಕಾರ್ಮಿಕರ ಸಾವು!

tv clinic
ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.

core technologies

ಶೋರನೂರ್‌ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ.

akshaya college

ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಶೋರನೂ‌ರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ-ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ 3.05ರ ಸುಮಾರಿಗೆ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಹಳಿಯಿಂದ ಕಾರ್ಮಿಕರು ಎಸೆಯಲ್ಪಟ್ಟಿದ್ದಾರೆ. ಮೂವರ ಶವಗಳನ್ನು ಈ ಸ್ಥಳದಿಂದ ಹೊರತೆಗೆಯಲಾಗಿದ್ದು, ನಾಲ್ಕನೆಯ ಮೃತದೇಹವನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ. ಇದು ಭರತಪುಳ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವೈದ್ಯಕೀಯ ವಿದ್ಯಾರ್ಥಿಗಳಿಂದ ಡ್ರಗ್ಸ್ ಪೆಡ್ಲಿಂಗ್‌| ಮೊಹಮ್ಮದ್ ನಿಗಾರೀಸ್, ಶಕೀಬ್, ಸಬೀರ್ ಉಳ್ಳಾಲ ಪೊಲೀಸರ ವಶ!

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು…

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು…