tamanvi
ಕರಾವಳಿರಾಜ್ಯ ವಾರ್ತೆ

ರೈಲು ಡಿಕ್ಕಿ: ನಾಲ್ಕು ಕಾರ್ಮಿಕರ ಸಾವು!

D_shiva_bhat
ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.

maithri

ಶೋರನೂರ್‌ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ.

ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಶೋರನೂ‌ರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ-ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ 3.05ರ ಸುಮಾರಿಗೆ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಹಳಿಯಿಂದ ಕಾರ್ಮಿಕರು ಎಸೆಯಲ್ಪಟ್ಟಿದ್ದಾರೆ. ಮೂವರ ಶವಗಳನ್ನು ಈ ಸ್ಥಳದಿಂದ ಹೊರತೆಗೆಯಲಾಗಿದ್ದು, ನಾಲ್ಕನೆಯ ಮೃತದೇಹವನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ. ಇದು ಭರತಪುಳ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಬೆಂಗಳೂರು: ಜೈನ್ ಆಹಾರೋತ್ಸವದಲ್ಲಿ ಸಾಂಪ್ರದಾಯಿಕ ಖಾದ್ಯಗಳ ಸವಿರುಚಿ, ವಿದ್ಯಾರ್ಥಿವೇತನ ವಿತರಣೆ

ಬೆಂಗಳೂರು: ಬಿಎಸ್‌ಎಂ ಜೈನ್ ಅಸೋಸಿಯೇಷನ್ (ರಿ) ವತಿಯಿಂದ ಬೆಂಗಳೂರಿನ ವಿಜಯನಗರದಲ್ಲಿ ಭಾನುವಾರ…

1 of 119